Webdunia - Bharat's app for daily news and videos

Install App

ಪ್ರಯಾಗರಾಜ್‌ನಲ್ಲಿ ಮಹಾ ಕುಂಭಮೇಳ ತೆರೆಬಿದ್ದ ಬೆನ್ನಲ್ಲೇ ಸ್ವಚ್ಛತಾ ಮೇಳಕ್ಕೆ ಚಾಲನೆ

Sampriya
ಗುರುವಾರ, 27 ಫೆಬ್ರವರಿ 2025 (15:14 IST)
Photo Courtesy X
ಪ್ರಯಾಗರಾಜ್‌: ಇಲ್ಲಿ ಒಂದೂವರೆ ತಿಂಗಳ ಕಾಲ ನಡೆದ ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವಕ್ಕೆ ಮಹಾಶಿವರಾತ್ರಿಯ ದಿನವಾದ ಬುಧವಾರ ತೆರೆಬಿದಿದ್ದೆ. ಈಗ ಸ್ವಚ್ಚತಾ ಮೇಳದ ಸರದಿ. ಭಕ್ತರು ಮಿಂದೆದ್ದ ತ್ರಿವೇಣಿ ಸಂಗಮದಲ್ಲಿ ನೈಮರ್ಲ್ಯ ಕಾರ್ಯ ಭರದಿಂದ ಸಾಗಿದೆ.

144 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 45 ದಿನಗಳ ಕಾಲ ನಡೆದಿದೆ. ಈ ಅವಧಿಯಲ್ಲಿ ಒಟ್ಟು 66 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದಿದ್ದು ಪುನೀತರಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಪುಣ್ಯಸ್ನಾನ ಮಾಡಿದ್ದಾರೆ.

ಜನವರಿ 13ರಿಂದ ಆರಂಭಗೊಂಡು ಬುಧವಾರದ ತನಕ ನಡೆದ ಕುಂಭಮೇಳವು ಸಣ್ಣ ಪುಟ್ಟ ಅಡಚಣೆ ಮಧ್ಯೆ ಯಶಸ್ವಿಯಾಗಿದೆ. ಕಾರ್ಯಕ್ರಮದ ಅಚ್ಚುಕಟ್ಟುತನಕ್ಕೆ ವಿರೋಧ ಪಕ್ಷಗಳ ನಾಯಕರಿಂದಲೂ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಮಹಾ ಕುಂಭಮೇಳಕ್ಕೆ ತೆರೆ ಬಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ಭಕ್ತರಿಗಾಗಿ ತಾತ್ಕಾಲಿವಾಗಿ ನಿರ್ಮಾಣ ಮಾಡಿದ್ದ ಟೆಂಟ್ ಸಿಟಿಯ ಸ್ವಚ್ಛತಾ ಕಾರ್ಯಕ್ಕೆ ಹಸಿರು ನಿಶಾನೆ ತೋರಿದರು.

ಇದೇ ವೇಳೆ ಮುಖ್ಯಮಂತ್ರಿ ಅವರು ಕುಂಭಮೇಳದಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು, ಉದ್ಯೋಗಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳನ್ನು ಸನ್ಮಾನಿಸಿದರು. ಇದೇ ವೇಳೆ ಮಹಾಕುಂಭ ಮೇಳದ ಸಮಯದಲ್ಲಿ ದಾಖಲಾದ ನಾಲ್ಕು ವಿಶ್ವ ದಾಖಲೆಗಳಿಗೆ ಪ್ರಮಾಣಪತ್ರಗಳನ್ನು ಆದಿತ್ಯನಾಥ್‌ ಸ್ವೀಕರಿಸಿದರು.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments