Webdunia - Bharat's app for daily news and videos

Install App

ಪಾಕ್ ಗೃಹ ಸಚಿವರ ಭೋಜನ ಕೂಟ ತಿರಸ್ಕರಿಸಿ ಸ್ವದೇಶಕ್ಕೆ ಮರಳಿದ ರಾಜನಾಥ್ ಸಿಂಗ್

Webdunia
ಗುರುವಾರ, 4 ಆಗಸ್ಟ್ 2016 (18:05 IST)
ಪಾಕಿಸ್ತಾನ ತಮ್ಮ ಭಾಷಣವನ್ನು ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಗೃಹ ಸಚಿವ ರಾಜನಾಥ್ ಸಿಂಗ್, ಪಾಕ್ ಗೃಹ ಸಚಿವ ಚೌಧರಿ ನಿಸಾರ್ ಅಲಿ ಖಾನ್ ಆಯೋಜಿಸಿದ್ದ ಮಧ್ಯಾಹ್ನದ ಭೋಜನಕೂಟವನ್ನು ತ್ಯಜಿಸಿ ಭಾರತಕ್ಕೆ ಮರಳಿದ್ದಾರೆ. 
 
ಏಳನೇ ಸಾರ್ಕ್ ಸಮ್ಮೇಳದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಗೃಹ ಸಚಿವರಿಗಾಗಿ ಖಾನ್, ಭೋಜನಕೂಟವನ್ನು ಏರ್ಪಡಿಸಿದ್ದರು. ಮುಖ್ಯ ಸಭೆಯ ನಂತರ ಊಟದ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ. 
 
ಏತನ್ಮಧ್ಯೆ, ಪಾಕಿಸ್ತಾನದ ಅಂತರಿಕ ವ್ಯವಹಾರಗಳ ಸಚಿವರು ಸಭೆಯ ಮುಕ್ತಾಯವಾದ ಕೂಡಲೇ ತೆರಳಿದ ಹಿನ್ನೆಲೆಯಲ್ಲಿ , ರಾಜನಾಥ್ ಸಿಂಗ್ ಭೋಜನವನ್ನು ತಿರಸ್ಕರಿಸುವ ನಿರ್ಧಾರ ತೆಗೆದುಕೊಂಡರು ಎಂದು ಮೂಲಗಳು ತಿಳಿಸಿವೆ.
 
ಕೇಂದ್ರ ಗೃಹ ಸಚಿವ ತಾವಿಳಿದುಕೊಂಡಿದ್ದ ಹೋಟೆಲ್‌ಗೆ ಆಗಮಿಸಿ, ಭಾರತೀಯ ನಿಯೋಗದಲ್ಲಿರುವ ಅಧಿಕಾರಿಗಳೊಂದಿಗೆ ಊಟ ಸೇವಿಸಿದರು ಎಂದು ಮೂಲಗಳು ತಿಳಿಸಿವೆ.
 
ಪಂಚತಾರಾ ಐಷಾರಾಮಿ ಸೆರೆನಾ ಹೋಟೆಲ್‌‌ನಲ್ಲಿ ನಡೆಯುತ್ತಿರುವ ಸಾರ್ಕ್ ಸಮ್ಮೇಳನಕ್ಕಾಗಿ ಆಗಮಿಸಿದ ರಾಜನಾಥ್ ಸಿಂಗ್, ಗೇಟ್ ಬಳಿ ನಿಂತಿದ್ದ ಪಾಕ್ ಗೃಹ ಸಚಿವ ಖಾನ್ ಅವರೊಂದಿಗೆ ಇಷ್ಟವಿಲ್ಲದಂತೆ ಹ್ಯಾಂಡ್‌ಶೇಕ್ ಮಾಡಿ ಸಭೆಗೆ ತೆರಳಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಇದಕ್ಕಿಂತ ಮೊದಲು ರಾಜನಾಥ್ ಸಿಂಗ್, ಭಯೋತ್ಪಾದಕರನ್ನು ವೈಭವೀಕರಿಸುವುದಲ್ಲದೇ ಅವರನ್ನು ಹುತಾತ್ಮರೆಂದು ಘೋಷಿಸುವುದು ಸರಿಯಲ್ಲ. ಭಯೋತ್ಪಾದಕರ ವಿರುದ್ಧ ಕಠಿಣ ಕಾರ್ಯಾಚರಣೆ ನಡೆಯಬೇಕು ಎನ್ನುವ ಸ್ಪಷ್ಟ ಸಂದೇಶವನ್ನು ಪಾಕಿಸ್ತಾನಕ್ಕೆ ರವಾನಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments