Webdunia - Bharat's app for daily news and videos

Install App

ಪ್ರಧಾನಿ ಮೋದಿ ಭೇಟಿ ಮಾಡಿದ ರಾಹುಲ್ ಗಾಂಧಿ

Webdunia
ಶುಕ್ರವಾರ, 16 ಡಿಸೆಂಬರ್ 2016 (12:24 IST)
ಸದನದಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಕೋಲಾಹಲದ ಮಧ್ಯೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಇಂದು ಪ್ರಧಾನಿ ಮೋದಿಯನ್ನು ಭೇಟಿ ಮಾಡಿದರು. ಮೋದಿ ಸದನದಲ್ಲಿ ಮಾತನಾಡಲಿದ್ದಾರೆ ಎಂಬ ಸುದ್ದಿಯ ನಡುವೆ ಕಾಂಗ್ರೆಸ್ ನಿಯೋಗ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲವನ್ನು ಕೆರಳಿಸಿದೆ.
ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಆನಂದ ಶರ್ಮಾ ಸೇರಿದಂತೆ ಹಿರಿಯ ನಾಯಕರನ್ನೊಳಗೊಂಡ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಿತು. ರಾಹುಲ್ ಉತ್ತರ ಪ್ರದೇಶದ ರೈತರ ಸಮಸ್ಯೆಗಳನ್ನಿಟ್ಟುಕೊಂಡು ಪ್ರಧಾನಿಯನ್ನು ಭೇಟಿ ಮಾಡಿದರು. ರೈತರ ಸಾಲಮನ್ನಾ, ಆತ್ಮಹತ್ಯೆಗೆ ತಡೆಗೆ ಕ್ರಮ ಕೈಗೊಳ್ಳುವಂತೆ ವಿನಂತಿಸಲಾಯಿತು ಎಂದು ಹೇಳಲಾಗುತ್ತಿದೆ. 
 
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್, ರೈತರ ಪರಿಸ್ಥಿತಿ ತುಂಬ ಕೆಟ್ಟದಾಗಿರುವುದನ್ನು ಪ್ರಧಾನಿ ಒಪ್ಪಿಕೊಂಡರು. ಆದರೆ ಸಾಲಮನ್ನಾದ ಬಗ್ಗೆ ಯಾವುದೇ ಆಶ್ವಾಸನೆ ನೀಡಲಿಲ್ಲ ಎಂದು ತಿಳಿಸಿದ್ದಾರೆ. ರಾಹುಲ್ ನೇತೃತ್ವದ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಿರುವುದು ಇದೇ ಮೊದಲೆನಿಸಿಕೊಂಡಿದೆ. 
 
ಒಬ್ಬರಿಗೊಬ್ಬರು ಬಹಿರಂಗ ಟೀಕೆ ಮಾಡಿಕೊಳ್ಳುತ್ತಿದ್ದ ನಾಯಕದ್ವಯರು ಭೇಟಿಯಾಗಿದ್ದು ಬಹಳಷ್ಟು ಕುತೂಹಲವನ್ನು ಕೆರಳಿಸಿದೆ.
ಇದು ಉತ್ತರ ಪ್ರದೇಶ ಚುನಾವಣೆಯನ್ನು ಮುಂದಿಟ್ಟುಕೊಂಡು ರೂಪಿಸಿದ ರಣತಂತ್ರ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದಾರೆ.
 
ಯುಪಿಯಲ್ಲಿ ಮತ್ತೆ ಮೂರು ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಜೆಪಿ- ಕಾಂಗ್ರೆಸ್ ಮಧ್ಯೆ ಹಗ್ಗಜಗ್ಗಾಟದ ಕುಸ್ತಿ ನಡೆಯಲಿದೆ ಎಂಬುದು ಶತಸಿದ್ಧ. ಅದಕ್ಕೆ ಮುಂಚೆ ರಾಜ್ಯದ ಜನರಿಗೆ ಒಂದು ಸ್ಪಷ್ಟ ರಾಜಕೀಯ ಸಂದೇಶವನ್ನು ಕೊಡಲು ರಾಹುಲ್ ಈ ಭೇಟಿ ಮಾಡಿದ್ದರು. ರೈತರ ಸಾಲ ಮನ್ನಾ ಮಾಡಲು ಪ್ರಧಾನಿ ಒಪ್ಪಲ್ಲ. ಇದನ್ನು ಉತ್ತರ ಪ್ರದೇಶದ ಜನರಿಗೆ ಮನದಟ್ಟು ಮಾಡಿಸಬೇಕೆಂಬುದು ರಾಹುಲ್ ರಾಜಕೀಯ ಕುತಂತ್ರ. ಹೀಗಾಗಿ ಅವರ ಭೇಟಿ ಔಪಚಾರಿಕವಾಗಿತ್ತು ಎಂಬುದು ರಾಜಕೀಯ ಪಂಡಿತರ ಲೆಕ್ಕಾಚಾರ.
 
ಭೇಟಿ ಸಮಯದಲ್ಲಿ ಮೋದಿ, ನೀವು ಸದನ ನಡೆಯಲಿಕ್ಕೆ ಬಿಡಬೇಕಿತ್ತು ಎಂದು ಕೈ ನಾಯಕರಿಗೆ ಹೇಳಿದರು. ಜತೆಗೆ ಆಗಾಗ್ಗೆ ಭೇಟಿ ಮಾಡುತ್ತಿರು ಎಂದು ರಾಹುಲ್ ಗಾಂಧಿ ಅವರಿಗೆ ಕಿವಿಮಾತು ಹೇಳಿದರು ಎಂದು ಮೂಲಗಳು ಹೇಳುತ್ತಿವೆ. 
 
ಏನೇ ಇರಲಿ ಮೊನ್ನೆ ತಾನೇ ಮೋದಿ ಮಾಡಿರುವ ಭ್ರಷ್ಟಾಚಾರದ ಮಾಹಿತಿ ನನ್ನ ಬಳಿ ಇದೆ ಎಂದಿದ್ದ ರಾಹುಲ್, ಪ್ರಧಾನಿಯನ್ನು ಭೇಟಿ ಮಾಡಿದ್ದು ಕೌತುಕವನ್ನು ಸೃಷ್ಟಿಸಿರುವುದು ಸತ್ಯ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಬ್ಯಾಂಕ್ ನಲ್ಲಿ ಹಣ ಇಡೋದು ಸೇಫಾ: ಗ್ರಾಹಕರಿಗೆ ಆತಂಕವಾಗಿರೋದು ಯಾಕೆ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಮುಂದಿನ ಸುದ್ದಿ
Show comments