Webdunia - Bharat's app for daily news and videos

Install App

ಮೋದಿ ಅಮೆರಿಕದಿಂದ ಮರಳಿದ ಕೆಲವೇ ಗಂಟೆಗಳಲ್ಲಿ ಅಮೆರಿಕ ವಿರುದ್ಧ ಸ್ವಾಮಿ ವಾಗ್ದಾಳಿ

Webdunia
ಶುಕ್ರವಾರ, 10 ಜೂನ್ 2016 (15:15 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅಮೆರಿಕದ ಯಶಸ್ವಿ ಪ್ರವಾಸ ಮುಗಿಸಿಕೊಂಡು ಭಾರತಕ್ಕೆ ಮರಳಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಅಮೆರಿಕದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ಕೆಲ ದಶಕಗಳ ಹಿಂದೆ ಭಾರತದ ಆರ್ಥಿಕತೆಯ ಸಂಪೂರ್ಣ ನಿಯಂತ್ರಣ ಹೊಂದಿದ್ದ ಅಂದಿನ ಸೋವಿಯತ್ ಯುನಿಯನ್‌ನಂತೆ ಅಮೆರಿಕ ವರ್ತಿಸುತ್ತಿದೆ ಎಂದು ಗುಡುಗಿದ್ದಾರೆ. 
 
ಸುಬ್ರಹ್ಮಣ್ಯಂ ಸ್ವಾಮಿ ಹೇಳಿಕೆಗಳು ಬಿಜೆಪಿಯ ಭಾರತ-ಅಮೆರಿಕ ಬಾಂಧವ್ಯದ ನಿಲುಗಳಿಗೆ ಸಂಪೂರ್ಣವಾಗಿ ವಿರೋಧವಾಗಿದ್ದು ಮತ್ತೊಂದು ವಿವಾದ ಸೃಷ್ಟಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ವಿಪಕ್ಷಗಳು ಸ್ವಾಮಿ ಹೇಳಿಕೆಯನ್ನು ಬ್ರಹ್ಮಾಸ್ತ್ರವಾಗಿ ಬಳಸುವ ಸಾಧ್ಯತೆಗಳಿವೆ. 
 
ರಾಜ್ಯಸಭೆ ಸದಸ್ಯರಾದ ಸ್ವಾಮಿ ಟ್ವಿಟ್ಟರ್‌ನಲ್ಲಿ, 1968ರಿಂದ 1991ರ ವರೆಗೆ ಭಾರತದ ರಾಜಕೀಯ ಮತ್ತು ಆರ್ಥಿಕ ಹಾಗೂ ಅಧಿಕಾರಿ ವರ್ಗದ ಮೇಲೆ ಸೋವಿಯತ್ ಯುನಿಯನ್ ಹೊಂದಿದ್ದ ಹಿಡಿತದ ವಿರುದ್ಧ ನಾನು ಹೋರಾಟ ಮಾಡಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.
 
ಪ್ರಧಾನಿ ಮೋದಿ ಅಮೆರಿಕದ ಕುತಂತ್ರಗಳಿಗೆ ಬಲಿಯಾಗದೆ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ. 
 
ಸ್ವಾಮಿ ಮತ್ತೊಂದು ಟ್ವಿಟ್ಟರ್ ಪೋಸ್ಟ್ ಮಾಡಿ, ಇದೀಗ ಸೋವಿಯತ್ ಯುನಿಯನ್ 16 ಭಾಗಗಳಾಗಿ ಒಡೆದು ಹೋಗಿದೆ. ಆದರೆ, ವಿಷಾದಕರ ಸಂಗತಿಯೆಂದರೆ ಅಮೆರಿಕ ಅಂದಿನ ಸೋವಿಯತ್ ಯುನಿಯನ್‌ನಂತೆ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ವಿರುದ್ಧ ಸಮರ ಸಾರಿರುವುದು ಕಂಡ ಬಿಜೆಪಿ ಹೈಕಮಾಂಡ್, ಸ್ವಾಮಿಯವರನ್ನು ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆ ಮಾಡಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಸತ್‌ ಕ್ಯಾಂಟೀನ್‌ನಲ್ಲಿ ಪೌಷ್ಟಿಕಾಂಶಯುಕ್ತ ಆಹಾರ, ಮೆನುವಿನಲ್ಲಿ ಭಾರೀ ಬದಲಾವಣೆ ತಂದ ಸ್ಪೀಕರ್‌

ಒಡಿಶಾ, ಶಿಕ್ಷಕನ ಲೈಂಗಿಕ ಕಿರುಕುಳಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ, ಪ್ರತಿಭಟನಕಾರರನ್ನು ಚದುರಿಸಲು ಜಲಫಿರಂಗಿ ಪ್ರಯೋಗ

ಪ್ರಧಾನಿ ಮೋದಿ ವಾರಕ್ಕೆ 100 ಗಂಟೆ ಕೆಲಸ ಮಾಡುವ ಏಕೈಕ ವ್ಯಕ್ತಿ: ನಾರಾಯಣ ಮೂರ್ತಿ

Karnataka Rain Alert: ಮುಂದಿನ 7 ದಿನಗಳ ಕಾಲ ಈ ಪ್ರದೇಶದಲ್ಲಿ ಭಾರೀ ಮಳೆ

ಬಿಜೆಪಿ, ಜೆಡಿಎಸ್ ಬೆಂಗಳೂರಿನ ಪರಿಸರ ಹಾಳು ಮಾಡುತ್ತಿದೆ: ರಣದೀಪ್ ಸುರ್ಜೇವಾಲ

ಮುಂದಿನ ಸುದ್ದಿ
Show comments