Webdunia - Bharat's app for daily news and videos

Install App

ಚುನಾವಣೆ ಸೋಲು: ಜೂನ್ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದಿಂದ ಚಿಂತನಾ ಶಿಬಿರ

Webdunia
ಮಂಗಳವಾರ, 31 ಮೇ 2016 (12:25 IST)
ಕಳೆದ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗಾಲಾಗಿರುವ ಕಾಂಗ್ರೆಸ್, ಹಿಮಾಚಲ್ ಪ್ರದೇಶ ಅಥಾ ಉತ್ತರಾಖಂಡ್‌ನಲ್ಲಿ ಜೂನ್ ತಿಂಗಳಲ್ಲಿ ಚಿಂತನಾ ಶಿಬಿರ ಆಯೋಜಿಸಲು ನಿರ್ಧರಿಸಿಲಾಗಿದೆ ಎಂದು ಮೂಲಗಳು ತಿಳಿಸಿವೆ.  
 
ಕಳೆದ ಲೋಕಸಭೆ ಚುನಾವಣೆಯಲ್ಲಿ 543 ಲೋಕಸಭೆ ಕ್ಷೇತ್ರಗಳಲ್ಲಿ ಕೇವಲ 45 ಸ್ಥಾನಗಳಲ್ಲಿ ಜಯಗಳಿಸಿದ್ದ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಸೋಲಿನ ಬಗ್ಗೆ ಪರಾಮರ್ಶೆ ನಡೆಸಿತ್ತು. ಇದೀಗ ಮತ್ತೊಮ್ಮೆ ಚಿಂತನಾ ಶಿಬಿರ ಆಯೋಜಿಸಲು ನಿರ್ಧರಿಸಿದೆ.
 
ಕಾಂಗ್ರೆಸ್ ಅಡಳಿತವಿರುವ ಕರ್ನಾಟಕ , ಉತ್ತರಾಖಂಡ್ ಅಥವಾ ಹಿಮಾಚಲ ಪ್ರದೇಶದಲ್ಲಿ ಚಿಂತನ ಶಿಬಿರಿ ಕಾರ್ಯಕ್ರಮ ಆಯೋಜಿಸಿಲು ಪಕ್ಷ ನಿರ್ಧರಿಸಿದೆ ಎಂದು ಅನಾಮಧೇಯರಾಗಿರ ಬಯಸಿದ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದ ವಲಯಗಳಲ್ಲಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಕೂಗು ಎದ್ದಿರುವ ಮಧ್ಯೆ, ಚಿಂತನೆ ಶಿಬಿರದಲ್ಲಿ ಚರ್ಚೆ ನಡೆಸಲು ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments