ಕಳೆದ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಸೋಲಿನಿಂದ ಕಂಗಾಲಾಗಿರುವ ಕಾಂಗ್ರೆಸ್, ಹಿಮಾಚಲ್ ಪ್ರದೇಶ ಅಥಾ ಉತ್ತರಾಖಂಡ್ನಲ್ಲಿ ಜೂನ್ ತಿಂಗಳಲ್ಲಿ ಚಿಂತನಾ ಶಿಬಿರ ಆಯೋಜಿಸಲು ನಿರ್ಧರಿಸಿಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ 543 ಲೋಕಸಭೆ ಕ್ಷೇತ್ರಗಳಲ್ಲಿ ಕೇವಲ 45 ಸ್ಥಾನಗಳಲ್ಲಿ ಜಯಗಳಿಸಿದ್ದ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ಸೋಲಿನ ಬಗ್ಗೆ ಪರಾಮರ್ಶೆ ನಡೆಸಿತ್ತು. ಇದೀಗ ಮತ್ತೊಮ್ಮೆ ಚಿಂತನಾ ಶಿಬಿರ ಆಯೋಜಿಸಲು ನಿರ್ಧರಿಸಿದೆ.
ಕಾಂಗ್ರೆಸ್ ಅಡಳಿತವಿರುವ ಕರ್ನಾಟಕ , ಉತ್ತರಾಖಂಡ್ ಅಥವಾ ಹಿಮಾಚಲ ಪ್ರದೇಶದಲ್ಲಿ ಚಿಂತನ ಶಿಬಿರಿ ಕಾರ್ಯಕ್ರಮ ಆಯೋಜಿಸಿಲು ಪಕ್ಷ ನಿರ್ಧರಿಸಿದೆ ಎಂದು ಅನಾಮಧೇಯರಾಗಿರ ಬಯಸಿದ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ವಲಯಗಳಲ್ಲಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಕೂಗು ಎದ್ದಿರುವ ಮಧ್ಯೆ, ಚಿಂತನೆ ಶಿಬಿರದಲ್ಲಿ ಚರ್ಚೆ ನಡೆಸಲು ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ವೆಬ್ದುನಿಯಾ ಮೊಬೈಲ್ ಆಪ್ (ಡೌನ್ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.