Webdunia - Bharat's app for daily news and videos

Install App

ಭೋಪಾಲ್: ಸಿಎಂ ಶಿವರಾಜ್ ಸಿಂಗ್ ವಿರುದ್ಧ ಚುನಾವಣೆ ಆಯುಕ್ತರಿಗೆ ಕಾಂಗ್ರೆಸ್ ದೂರು

Webdunia
ಶನಿವಾರ, 27 ಜೂನ್ 2015 (16:12 IST)
ಗಾರೋಥ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.
 
ಲಲಿತ್ ಮೋದಿ ಪ್ರಕರಣದಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೇ ವಿವಾದದ ಸುಳಿಗೆ ಸಿಲುಕಿರುವ ಮಧ್ಯೆ, ಇದೀಗ ಮಧ್ಯಪ್ರದೇಶದ ಮುಖ್ಯಮಂತ್ರಿ ಚೌಹಾನ್ ಕೂಡಾ ಮತ್ತೆ ವಿವಾದಕ್ಕೆ ಕಾರಣವಾಗಿರುವುದು ಬಿಜೆಪಿ ಹೈಕಮಾಂಡ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
 
ಕಾಂಗ್ರೆಸ್ ಪಕ್ಷದ ಪ್ರದಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಮತ್ತು ಮೋಹನ್ ಪ್ರಕಾಶ್ ಇಂದು ಚುನಾವಣೆ ಆಯುಕ್ತ ನಸೀಮ್ ಜೈದಿಯವರನ್ನು ಭೇಟಿ ಮಾಡಿ, ಸಿಎಂ ಚೌಹಾನ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ದೂರು ನೀಡಿದ್ದಾರೆ.   
 
ಒಂದು ಪ್ರತ್ಯೇಕ ಸಮುದಾಯದ ಮತಗಳನ್ನು ಬಿಜೆಪಿ ಪರ ಹಾಕಿಸಿದಲ್ಲಿ ಸೂಕ್ತ ಬಹುಮಾನ ನೀಡಲಾಗುವುದು ಎನ್ನುವ ಸಿಎಂ ಹೇಳಿಕೆಯ ಧ್ವನಿ ಸುರುಳಿಯ ಸಿಡಿಯನ್ನು ಚುನಾವಣೆ ಆಯುಕ್ತರಿಗೆ ಕಾಂಗ್ರೆಸ್ ಮುಖಂಡರು ಸಾಕ್ಷ್ಯವಾಗಿ ನೀಡಿದ್ದಾರೆ.
 
ಎಐಸಿಸಿ ಪ್ರದಾನ ಕಾರ್ಯದರ್ಶಿ ಸಿ.ಪಿ.ಜೋಷಿ ಮಾತನಾಡಿ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ವಸುಂಧರಾ ರಾಜೇ ನೈತಿಕ ಮೌಲ್ಯಗಳನ್ನು ಗಾಳಿಗೆ ತೂರಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments