Publish Date: Fri, 06 Jan 2017 (19:38 IST)
Updated Date: Fri, 06 Jan 2017 (19:40 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಕಮ್ಮನಹಳ್ಳಿಯಲ್ಲಿ ನಡೆದ ದುಷ್ಕೃತ್ಯಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಆದರೆ ನಗರದಲ್ಲಿ ಅಂತಹ ಘಟನೆಗಳು ಮರುಕಳಿಸುತ್ತಲೇ ಇವೆ.
ಇಂದು ಮುಂಜಾನೆ ಕೆ. ಜಿ ಹಳ್ಳಿಯಲ್ಲಿ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ವರದಿಯಾಗಿದೆ.
ನಸುಕಿನ ಜಾವ 6.30ರ ಸುಮಾರಿಗೆ ಈ ಕೃತ್ಯ ನಡೆದಿದ್ದು, ಬಸ್ ಹತ್ತಲು ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ ಕಾಮುಕ ಆಕೆಯ ತುಟಿಗೆ ಮುತ್ತಿಟ್ಟು ನಾಲಿಗೆ ಕಚ್ಚಿದ್ದಾನೆ. ಯುವತಿ ಕಿರುಚಾಡುತ್ತಿದ್ದಂತೆ ಅಲ್ಲೇ ಹತ್ತಿರದ ಮನೆಯಲ್ಲಿದ್ದ ನಾಯಿ ಜೋರಾಗಿ ಬೊಗಳಿದೆ. ಕೂಡಲೇ ಸಾರ್ವಜನಿಕರು ಅಲ್ಲಿಗೋಡಿ ಬಂದಿದ್ದು ಕೀಚಕ ಮನಸ್ಥಿತಿಯ ಆರೋಪಿ ಪರಾರಿಯಾಗಿದ್ದಾನೆ.
ಈ ದೃಶ್ಯಾವಳಿಗಳೆಲ್ಲ ಹತ್ತಿರದ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ