Webdunia - Bharat's app for daily news and videos

Install App

ಶೇಮ್ ಶೇಮ್ ಬೆಂಗಳೂರು: ಮಹಿಳೆಯ ತುಟಿಗೆ ಮುತ್ತಿಟ್ಟು, ನಾಲಿಗೆ ಕಚ್ಚಿ ಪರಾರಿಯಾದ ಕಾಮಾಂಧ

Webdunia
ಶುಕ್ರವಾರ, 6 ಜನವರಿ 2017 (19:38 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಮತ್ತು ಕಮ್ಮನಹಳ್ಳಿಯಲ್ಲಿ ನಡೆದ ದುಷ್ಕೃತ್ಯಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಆದರೆ ನಗರದಲ್ಲಿ ಅಂತಹ ಘಟನೆಗಳು ಮರುಕಳಿಸುತ್ತಲೇ ಇವೆ.
 
ಇಂದು ಮುಂಜಾನೆ ಕೆ. ಜಿ ಹಳ್ಳಿಯಲ್ಲಿ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಹೇಯ ಘಟನೆ ವರದಿಯಾಗಿದೆ.
 
ನಸುಕಿನ ಜಾವ 6.30ರ ಸುಮಾರಿಗೆ ಈ ಕೃತ್ಯ ನಡೆದಿದ್ದು, ಬಸ್ ಹತ್ತಲು ತೆರಳುತ್ತಿದ್ದ ಯುವತಿಯನ್ನು ಅಡ್ಡಗಟ್ಟಿದ ಕಾಮುಕ ಆಕೆಯ ತುಟಿಗೆ ಮುತ್ತಿಟ್ಟು ನಾಲಿಗೆ ಕಚ್ಚಿದ್ದಾನೆ. ಯುವತಿ ಕಿರುಚಾಡುತ್ತಿದ್ದಂತೆ ಅಲ್ಲೇ ಹತ್ತಿರದ ಮನೆಯಲ್ಲಿದ್ದ ನಾಯಿ ಜೋರಾಗಿ ಬೊಗಳಿದೆ. ಕೂಡಲೇ ಸಾರ್ವಜನಿಕರು ಅಲ್ಲಿಗೋಡಿ ಬಂದಿದ್ದು ಕೀಚಕ ಮನಸ್ಥಿತಿಯ ಆರೋಪಿ ಪರಾರಿಯಾಗಿದ್ದಾನೆ. 
 
ಈ ದೃಶ್ಯಾವಳಿಗಳೆಲ್ಲ ಹತ್ತಿರದ ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
 
ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ