Webdunia - Bharat's app for daily news and videos

Install App

ಭಾರತದ ಸಾಮಾಜಿಕ ನೀತಿಗೆ ವಿರುದ್ಧ, ಎಲ್ಲಾ ಅರ್ಜಿ ವಜಾಗೊಳಿಸಿ : ಕೇಂದ್ರ ಸರ್ಕಾರ

Webdunia
ಮಂಗಳವಾರ, 18 ಏಪ್ರಿಲ್ 2023 (10:54 IST)
ನವದೆಹಲಿ : ಸಲಿಂಗ ವಿವಾಹಕ್ಕೆ ಮಾನ್ಯತೆ ಕೋರಿ ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠದ ವಿಚಾರಣೆಗೂ ಮುನ್ನ ಇದೀಗ ಕೇಂದ್ರ ಮತ್ತೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವುದನ್ನು ವಿರೋಧಿಸಿದೆ.
 
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನೇತೃತ್ವದ ಪೀಠ ಏಪ್ರಿಲ್ 18ರಂದು ಈ ಕುರಿತು ವಿಚಾರಣೆ ನಡೆಸಲಿದೆ. ಈ ಬಗ್ಗೆ ವಿಚಾರಣೆಗೆ ಒಂದು ದಿನ ಬಾಕಿ ಇರುವಾಗಲೇ ಕೇಂದ್ರ ಸಲಿಂಗ ವಿವಾಹ ಸಾಮಾಜಿಕ ನೀತಿಗೆ ವಿರುದ್ಧವಾಗಿದೆ. ಇದನ್ನು ಸಮಾಜಮುಖಿಯಾಗಿ ಅನೇಕರು ವಿರೋಧ ಮಾಡುತ್ತಾರೆ ಎಂದು ಹೇಳಿದೆ.

ಇದು ಭಿನ್ನ ಲಿಂಗೀಯ ಮದುವೆಯ ಮೇಲೆ ದೊಡ್ಡ ಪರಿಣಾಮವನ್ನು ಉಂಟುಮಾಡುತ್ತದೆ. ಸಲಿಂಗಿಗಳ ಮದುವೆ ಪರಿಕಲ್ಪನೆ ಹೊಸ ಸಾಮಾಜಿಕ ಸಂಸ್ಥೆಯನ್ನು ರಚಿಸುತ್ತದೆ. ಇದು ಮೂಲಭೂತವಾಗಿ ಶಾಸಕಾಂಗದ ಕಾರ್ಯವಾಗಿದ್ದು ನ್ಯಾಯಾಲಯಗಳು ನಿರ್ಧರಿಸುವ ವಿಷಯವಲ್ಲ.

ಜನರ ಹಿತದೃಷ್ಟಿಯಿಂದ ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕು ಹಾಗೂ ತೀರ್ಮಾನವನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ವಜಾಗೊಳಿಸುವಂತೆ ಕೇಂದ್ರ ಸರ್ಕಾರದ ಅರ್ಜಿಯಲ್ಲಿ ಮನವಿ ಮಾಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments