Webdunia - Bharat's app for daily news and videos

Install App

ಬರೋಬ್ಬರಿ 11 ಡೋಸ್ ಲಸಿಕೆ ಪಡೆದ 84ರ ವೃದ್ಧ !

Webdunia
ಬುಧವಾರ, 5 ಜನವರಿ 2022 (13:18 IST)
ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಕಳೆದ ವರ್ಷ ಜನವರಿ 16ರಿಂದ ಲಸಿಕೆ ಅಭಿಯಾನ ಶುರುವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಸರಿಯಾಗಿ ಒಂದು ವರ್ಷ ತುಂಬಲಿದೆ.

ಇಷ್ಟಾದರೂ ಇನ್ನೂ ಅನೇಕರಿಗೆ ಕೊವಿಡ್ 19 ಲಸಿಕೆ ಎರಡನೇ ಡೋಸ್ ಆಗಿಲ್ಲ. ಒಂದಷ್ಟು ಮಂದಿ ಮೊದಲನೇ ಡೋಸ್ ತೆಗೆದುಕೊಂಡಿಲ್ಲ. ಇಷ್ಟೆಲ್ಲದರ ಮಧ್ಯೆ ಇಲ್ಲೊಬ್ಬರು 84 ವರ್ಷದ ವೃದ್ಧ ಕೊರೊನಾ ಲಸಿಕೆ 11 ಡೋಸ್ ತೆಗೆದುಕೊಂಡಿದ್ದಾರೆ.

ಅಂದಹಾಗೆ, ಇವರ ಹೆಸರು ಬ್ರಹ್ಮದೇವ್ ಮಂಡಲ್. ಬಿಹಾರ ರಾಜ್ಯದ ಮಾದೇಪುರ ಜಿಲ್ಲೆಯ ಉದಕಿಶುಂಗಂಜ್ ಉಪ-ವಿಭಾಗದಲ್ಲಿರುವ ಓರೈ ಎಂಬ ಗ್ರಾಮದವರು. 11 ಡೋಸ್ ತೆಗೆದುಕೊಂಡು, 12ನೇ ಡೋಸ್ ಪಡೆಯಲು ಬಂದಾಗ ಸಿಕ್ಕಿಬಿದ್ದಿದ್ದಾರೆ.

ಇಷ್ಟೊಂದು ಡೋಸ್ ಲಸಿಕೆಯನ್ನು ಬ್ರಹ್ಮದೇವ್ ಹೇಗೆ ಪಡೆದರು ಎಂಬ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು ಎಂದು ಮಾದೇಪುರ ಜಿಲ್ಲಾ ಸರ್ಜನ್ ತಿಳಿಸಿದ್ದಾರೆ.

ತಾವು ಕೊರೊನಾ ಲಸಿಕೆ 11 ಡೋಸ್ ಪಡೆದಿದ್ದನ್ನು ಮಂಡಲ್ ಒಪ್ಪಿಕೊಂಡಿದ್ದಾರೆ. ನಾನು ಕೊವಿಡ್ 19 ಲಸಿಕೆಯಿಂದ ಹಲವು ರೀತಿಯ ಅನುಕೂಲ ಪಡೆದಿದ್ದೇನೆ. ಹಾಗಾಗಿ ಪದೇಪದೆ ಅದನ್ನು ತೆಗೆದುಕೊಂಡೆ ಎಂದು ಹೇಳಿದ್ದಾರೆ. ಕೊರೊನಾ ಲಸಿಕೆಯನ್ನು ಹೊರತಂದು ಕೇಂದ್ರ ಸರ್ಕಾರ ತುಂಬ ಒಳ್ಳೆಯ ಕೆಲಸ ಮಾಡಿದೆ. ದಯವಿಟ್ಟು ಎಲ್ಲರೂ ಲಸಿಕೆ ಪಡೆಯಿರಿ ಎಂದು ಕರೆ ಕೊಟ್ಟಿದ್ದಾರೆ.

84ವರ್ಷದ ವೃದ್ಧ 11 ಡೋಸ್ ಪಡೆಯಲು ಸಾಧ್ಯವಾಗಿದ್ದು ಹೇಗೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆಫ್ಲೈನ್ ನೋಂದಣಿ ಮಾಡಿ ಲಸಿಕೆ ನೀಡಲಾಗುವ ಕ್ಯಾಂಪ್ಗಳಲ್ಲಿ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ.

ಕಂಪ್ಯೂಟರ್ಲ್ಲಿ ಡಾಟಾಗಳನ್ನು ಇಡುವುದಕ್ಕೂ, ಆಫ್ಲೈನ್ನಲ್ಲಿ ಆಧಾರ್ ನಂಬರ್-ಫೋನ್ ನಂಬರ್ ಸಂಗ್ರಹಿಸಿ, ಲಸಿಕೆ ನೀಡುವುದಕ್ಕೂ ವ್ಯತ್ಯಾಸವಿದೆ. ಆದರೆ ಈ ವ್ಯಕ್ತಿಯ ವಿಷಯದಲ್ಲಿ ಏನಾಗಿದೆ ಎಂಬುದನ್ನು ತನಿಖೆ ನಡೆಸಲಾಗುವುದು ಎಂದು ಮಾದೇಪುರ ಜಿಲ್ಲೆಯ ಸಿವಿಲ್ ಸರ್ಜನ್ ಅಮರೇಂದ್ರ ಪ್ರತಾಪ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳ್ಳತನ ಆರೋಪದ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಚುನಾವಣಾ ಆಯೋಗ

ಧರ್ಮಸ್ಥಳ ಎಸ್ಐಟಿ ತನಿಖೆಯಲ್ಲಿ ಮಹತ್ವದ ನಿರ್ಧಾರ

ಧರ್ಮಸ್ಥಳ ವಿಚಾರದಲ್ಲಿ ಕ್ಷಮೆ ಕೇಳಿ ಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ದೇಶದಲ್ಲಿ ನಾನೇ ನಂ 1 ಗೃಹಸಚಿವ, ಹೇಳ್ಕೊಳ್ಳೋರು ಹೇಳ್ಕೊಳ್ಳಿ: ಡಾ ಜಿ ಪರಮೇಶ್ವರ್

ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ, ಪೈಲೆಟ್‌ ಸಮಯ ಪ್ರಜ್ಞೆ ತಪ್ಪಿಸಿತು ದೊಡ್ಡ ದುರಂತ

ಮುಂದಿನ ಸುದ್ದಿ
Show comments