Webdunia - Bharat's app for daily news and videos

Install App

ಅಗ್ನಿ-ಪಿ ಕ್ಷಿಪಣಿಯ ಪರೀಕ್ಷೆ ಯಶಸ್ವಿ: ವಿಶೇಷತೆ ಏನು?

Webdunia
ಶನಿವಾರ, 18 ಡಿಸೆಂಬರ್ 2021 (12:00 IST)
ಬಾಲಸೋರ್ : ಒಡಿಶಾದ ಕರಾವಳಿ ತೀರ ಬಾಲಸೋರ್ನಿಂದ ಅಗ್ನಿ ಪ್ರೈಮ್ ಕ್ಷಿಪಣಿಯನ್ನು ಶನಿವಾರ ಯಶಸ್ವಿಯಾಗಿ ಪರೀಕ್ಷಾರ್ಥ ಉಡಾವಣೆ ಮಾಡಲಾಗಿದೆ.

ಅಗ್ನಿ-ಪಿ (ಪ್ರೈಮ್) ಹೊಸ ತಲೆಮಾರಿನ ಅಣ್ವಸ್ತ್ರ ಸಿಡಿತಲೆಯನ್ನು ಹೊತ್ತೊಯ್ಯುವ ಸಾಮರ್ಥ್ಯದ ಖಂಡಾಂತರ ಕ್ಷಿಪಣಿಯಾಗಿದ್ದು, ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಉಡಾವಣೆ ಮಾಡಲಾಯಿತು.

ಅತ್ಯಾಧುನಿಕ ಅಗ್ನಿ ದರ್ಜೆಯ ಕ್ಷಿಪಣಿ ಪ್ರಭೇದದ ಹೊಸ ಪೀಳಿಗೆಯ ಕ್ಷಿಪಣಿಯು 1,000 ದಿಂದ 2,000 ಕಿಮೀ ದೂರದ ವ್ಯಾಪ್ತಿಯವರೆಗೆ ಕ್ರಮಿಸುವ ಸಾಮರ್ಥ್ಯವಿದೆ. ಅಗ್ನಿ ಪ್ರೈಮ್ ಕ್ಷಿಪಣಿಯ ಪರೀಕ್ಷೆಯ ಸಂದರ್ಭದಲ್ಲಿ ಅದಕ್ಕೆ ಅನೇಕ ಹೊಸ ಫೀಚರ್ಗಳನ್ನು ಅಳವಡಿಸಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದು ಅಗ್ನಿ ಪ್ರೈಮ್ ಕ್ಷಿಪಣಿಯ ಎರಡನೇ ಪರೀಕ್ಷಾರ್ಥ ಪ್ರಯೋಗವಾಗಿದೆ. ಕ್ಷಿಪಣಿಯ ಚಲನೆಯನ್ನು ಪರಿಶೀಲಿಸಲು ಹಾಗೂ ನಿಗಾ ವಹಿಸಲು ಪೂರ್ವ ಕರಾವಳಿಯ ಉದ್ದಕ್ಕೂ ವಿವಿಧ ದೂರಸ್ಥಮಾಪಕ  ಮತ್ತು ರೇಡಾರ್ ಸ್ಟೇಷನ್ಗಳನ್ನು ಅಳವಡಿಸಲಾಗಿದೆ.

ಅತ್ಯಧಿಕ ಮಟ್ಟದ ನಿಖರತೆಯೊಂದಿಗೆ ಕ್ಷಿಪಣಿ ಪರೀಕ್ಷೆಯು ತನ್ನ ಎಲ್ಲಾ ಯೋಜನಾ ಧ್ಯೇಯೋದ್ದೇಶಗಳನ್ನು ಈಡೇರಿಸಿದೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments