Webdunia - Bharat's app for daily news and videos

Install App

ಕೃಷಿಕರಿಗೆ ಕೇಂದ್ರದ ಗುಡ್ ನ್ಯೂಸ್: ಸಂಸತ್ ನಲ್ಲಿ ಘೋಷಣೆ

Krishnaveni K
ಶುಕ್ರವಾರ, 6 ಡಿಸೆಂಬರ್ 2024 (16:48 IST)
Photo Credit: X
ನವದೆಹಲಿ: ರೈತರ ಬಹುದಿನಗಳ ಬೇಡಿಕೆಗೆ ಕೊನೆಗೂ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಎಲ್ಲಾ ಕೃಷಿ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಗೆ ಖರೀದಿ ಮಾಡಲಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಾಜ್ಯಸಭೆಯಲ್ಲಿ ಘೋಷಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಅವರು ಈ ವಿಚಾರ ಹೇಳಿದ್ದಾರೆ. ರೈತರಿಗೆ ಎಂಎಸ್ ಪಿ ಸಮಸ್ಯೆಯ ಕುರಿತ ಪೂರಕ ಪ್ರಶ್ನೆಗಳಿಗೆ ಅವರು ಈ ಉತ್ತರ ನೀಡಿದ್ದಾರೆ. ಎಂಎಸ್ ಪಿಗೆ ಕಾನೂನು ಬೆಂಬಲ ಸೇರಿದಂತೆ ಹಲವು ಬೇಡಿಕೆಗಳನ್ನಿಟ್ಟುಕೊಂಡು ರೈತರು ದೆಹಲಿಯತ್ತ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದ್ದರು.

ಈ ಮೂಲಕ ರೈತರ ಬೇಡಿಕೆ ಈಡೇರಿದೆ. ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ಈ ಮೂಲಕ ಸ್ಪಷ್ಟನೆ ನೀಡುತ್ತೇನೆ. ಇದು ಮೋದಿ ಸರ್ಕಾರದ ಭರವಸೆಯಾಗಿದೆ. ನಾವು ಸದಾ ರೈತರ ಪರವಾಗಿ ಇದ್ದೇವೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಅಷ್ಟೇ ಅಲ್ಲದೆ, ವಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಅವರು ವಿಪಕ್ಷಗಳು ಅಧಿಕಾರದಲ್ಲಿದ್ದಾಗ ಸ್ವಾಮಿನಾಥನ್ ವರದಿ ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆ ಬರೆದಿದ್ದರು. ಪ್ರತಿಪಕ್ಷಗಳು ಎಂದಿಗೂ ರೈತರನ್ನು ಗೌರವಿಸಿಲ್ಲ. ರೈತರ ಬೇಡಿಕೆಯನ್ನು ಯಾವತ್ತೂ ಗಂಭೀರವಾಗಿ ಪರಿಗಣಿಸಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments