Webdunia - Bharat's app for daily news and videos

Install App

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Krishnaveni K
ಶುಕ್ರವಾರ, 13 ಜೂನ್ 2025 (16:45 IST)
Photo Credit: X
ಕಾಸರಗೋಡು: ಅಹಮ್ಮದಾಬಾದ್ ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಸಾವನ್ನಪ್ಪಿದ ಕೇರಳ ಮೂಲದ ನರ್ಸ್ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಕಾಸರಗೋಡಿನ ವೆಳ್ಳರಿಕುಂಡ್ ಉಪ ತಹಶೀಲ್ದಾರ್ ನನ್ನು ಅಮಾನತು ಮಾಡಲಾಗಿದೆ.

ನಿನ್ನೆ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮಡಿದವರ ಪೈಕಿ ರಂಜಿತಾ ಕೂಡಾ ಒಬ್ಬರು. ಲಂಡನ್ ನಲ್ಲಿ ವೃತ್ತಿಯಲ್ಲಿದ್ದ ರಂಜಿತಾಗೆ ಕೇರಳದಲ್ಲಿ ಆರೋಗ್ಯ ಇಲಾಖೆಯಲ್ಲಿ ಕೆಲಸ ಸಿಕ್ಕಿತ್ತು. ಹೀಗಾಗಿ ಕೆಲಸದ ನಿಮಿತ್ತ ಲಂಡನ್ ನಿಂದ ಬಂದಿದ್ದ ರಂಜಿತಾ ಮಕ್ಕಳೊಂದಿಗೆ ಕಾಲ ಕಳೆದು ಲಂಡನ್ ನಲ್ಲಿ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲು ಹೊರಟಿದ್ದರು.

ಆದರೆ ಇದೇ ವೇಳೆ ಅವರು ದುರಂತಕ್ಕೀಡಾಗಿದ್ದಾರೆ. ರಂಜಿತಾ ಸಾವಿನ ಬಗ್ಗೆ ಇಡೀ ಕೇರಳವೇ ದುಃಖ ವ್ಯಕ್ತಪಡಿಸಿದ್ದರೆ ವೆಳ್ಳರಿಕುಂಡ್ ಉಪ ತಹಶೀಲ್ದಾರ್ ಪವಿತ್ರನ್ ವ್ಯಂಗ್ಯ ಮಾಡಿ ಕಾಮೆಂಟ್ ಮಾಡಿದ್ದರು. ಆಕೆ ಇನ್ನೂ ಎತ್ತರಕ್ಕೆ ಹಾರಲಿ ಎಂದಿದ್ದರು.

ಅವರ ಈ ಕಾಮೆಂಟ್ ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹಲವರು ಆನ್ ಲೈನ್ ಮೂಲಕವೇ ಸಿಎಂ ಪಿಣರಾಯಿ ವಿಜಯನ್ ಗೆ ದೂರು ಸಲ್ಲಿಸಿದ್ದರು. ಇದರ ಬೆನ್ನಲ್ಲೇ ಕಾಸರಗೋಡು ಜಿಲ್ಲಾಧಿಕಾರಿಗಳನ್ನು ಉಪ ತಹಶೀಲ್ದಾರ್ ಪವಿತ್ರನ್ ರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments