Webdunia - Bharat's app for daily news and videos

Install App

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

Krishnaveni K
ಸೋಮವಾರ, 16 ಜೂನ್ 2025 (09:55 IST)
ಅಹಮದಾಬಾದ್: ಗುಜರಾತ್ ನ ಅಹಮದಾಬಾದ್ ನಲ್ಲಿ ವಿಮಾನ ದುರಂತವಾದ ಸ್ಥಳ ಈಗ ಜನರಿಗೆ ವಿಸಿಟಿಂಗ್ ಜಾಗವಾಗಿದ್ದು, ಇದರಿಂದ ತನಿಖಾಧಿಕಾರಿಗಳಿಗೆ ಹೊಸ ತಲೆನೋವು ಶುರುವಾಗಿದೆ.

ಜೂನ್ 12 ರಂದು ಅಹಮದಾಬಾದ್ ನಲ್ಲಿ ವಿಮಾನ ಪತನವಾದ ಬಿಜೆ ಮೆಡಿಕಲ್ ಕಾಲೇಜು ಆಸ್ಪತ್ರೆ ಸುತ್ತಮುತ್ತಲ ಪ್ರದೇಶಕ್ಕೆ ನಿತ್ಯವೂ ಸಾಕಷ್ಟು ಸಂಖ್ಯೆಯಲ್ಲಿ ಈಗ ಜನರು ಬರುತ್ತಿದ್ದಾರೆ. ಕುತೂಹಲದಿಂದ ಸ್ಥಳ ವೀಕ್ಷಣೆಗೆಂದೇ ನೂರಾರು ಜನರು ಬರುತ್ತಿದ್ದಾರೆ.

ಇದರಿಂದ ತನಿಖಾಧಿಕಾರಿಗಳಿಗೆ ತಲೆನೋವಾಗುತ್ತಿದೆ. ಸಾಕಷ್ಟು ಸಂಖ್ಯೆಯಲ್ಲಿ ಜನರು ಸ್ಥಳ ವೀಕ್ಷಣೆಗೆಂದು ಬರುತ್ತಿದ್ದಾರೆ. ಇದರಿಂದ ತನಿಖಾಧಿಕಾರಿಗಳಿಗೆ ತಮ್ಮ ಕೆಲಸ ಸುಗಮವಾಗಿ ನೆರವೇರಿಸಲು ಸಾಧ್ಯವಾಗುತ್ತಿಲ್ಲ. ಜನರು ಅಲ್ಲಿನ ಸಾಕ್ಷ್ಯಗಳಿಗೆ ಹಾನಿ ಮಾಡುತ್ತಾರೆ ಎಂಬುದೇ ಅಧಿಕಾರಿಗಳ ಆತಂಕವಾಗಿದೆ.

ಹೀಗಾಗಿ ಜನರು ಬಾರದಂತೆ ತನಿಖಾಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಈಗಲೂ ಸ್ಥಳದಲ್ಲಿ ಬೀಡುಬಿಟ್ಟಿರುವ ಅಧಿಕಾರಿಗಳು ಅವಶೇಷಗಳಡಿಯಲ್ಲಿ ಹುಡುಕಾಟ ನಡೆಸುತ್ತಲೇ ಇದ್ದಾರೆ. ಇದರ ನಡುವೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದರೆ ಅವರನ್ನು ನಿಯಂತ್ರಿಸುವುದೇ ಕೆಲಸವಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments