Webdunia - Bharat's app for daily news and videos

Install App

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

Krishnaveni K
ಸೋಮವಾರ, 16 ಜೂನ್ 2025 (10:56 IST)
Photo Credit: X
ಅಹಮದಾಬಾದ್: ಏರ್ ಇಂಡಿಯಾ ವಿಮಾನ ದುರಂತವಾಗಿ ನಾಲ್ಕು ದಿನವಾದರೂ ಇನ್ನೂ ಎಲ್ಲರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿಲ್ಲ. ಈ ನಡುವೆ ಒಂದೇ ಶವ ಚೀಲದಲ್ಲಿ ಎರಡು ತಲೆ ಇದ್ದಿದ್ದು ಪತ್ತೆಯಾಗಿದೆ. ಹೀಗಾಗಿ ಕುಟುಂಬಸ್ಥರು ಮೃತದೇಹವನ್ನು ಆಸ್ಪತ್ರೆಗೆ ಮರಳಿಸಿದ್ದಾರೆ.

ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಗುರುತಿಸುವ ಸ್ಥಿತಿಯಲ್ಲೇ ಇಲ್ಲ. ಅಷ್ಟರಮಟ್ಟಿಗೆ ಸುಟ್ಟು ಕರಕಲಾಗಿದೆ. ಹೀಗಾಗಿ ಕುಟುಂಬಸ್ಥರ ಡಿಎನ್ ಎ ಮ್ಯಾಚ್ ಮಾಡಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ. ಇನ್ನೂ ಕೇವಲ 80 ಮೃತದೇಹಗಳ ಡಿಎನ್ಎ ಪರೀಕ್ಷೆಯಷ್ಟೇ ನಡೆದಿದೆ.

ಈ ನಡುವೆ ಸಂಬಂಧಿಕರೊಬ್ಬರಿಗೆ ಮೃತದೇಹದ ಬ್ಯಾಗ್ ಹಸ್ತಾಂತರಿಸುವಾಗ ಅದರಲ್ಲಿ ಎರಡು ತಲೆ ಕಂಡುಬಂದಿದೆ. ಹೀಗಾಗಿ ಕುಟುಂಬಸ್ಥರು ಅದನ್ನು ಮತ್ತೆ ಆಸ್ಪತ್ರೆಗೆ ಮರಳಿಸಿದ್ದಾರೆ. ಇದೀಗ ಮತ್ತೊಮ್ಮೆ ಡಿಎನ್ ಎ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮರಳಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಸ್ಫೋಟವಾಗಿ ಹಲವರ ಬಲಿ ಪಡೆದ ಉತ್ತರಕಾಶಿಯಲ್ಲಿ ಈಗ ಹೇಗಿದೆ ಗೊತ್ತಾ ಪರಿಸ್ಥತಿ

ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದ್ದ ಪಾಕ್‌ ಸರ್ಕಾರಕ್ಕೆ ಭಾರೀ ನಷ್ಟ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments