ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ

Sampriya
ಗುರುವಾರ, 13 ಜೂನ್ 2024 (18:02 IST)
Photo Courtesy X
ನವದೆಹಲಿ: ದೇಶದ ಟ್ರಬಲ್‌ ಶೂಟರ್‌ ಎಂದೇ ಹೆಸರು ಗಳಿಸಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರನ್ನು ಕೇಂದ್ರ ಸರ್ಕಾರವು ಮೂರನೇ ಅವಧಿಗೂ ಸಲೆಹೆಗಾರರನ್ನಾಗಿ ನೇಮಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಮುಖ್ಯ ಕಾರ್ಯದರ್ಶಿಯಾಗಿ ಪಿ.ಕೆ.ಮಿಶ್ರಾ ಅವರೇ ಮುಂದುವರಿಯಲಿದೆ. ಇವರ ನೇಮಕದ ಕುರಿತು ಕೂಡ ಸರ್ಕಾರ ಆದೇಶ ಹೊರಡಿಸಿದೆ.

ಪಾಕಿಸ್ತಾನದ ಉಗ್ರರ ವಿರುದ್ಧ ಸರ್ಜಿಕಲ್‌ ಸ್ಟ್ರೈಕ್, ಬಾಲಾಕೋಟ್‌ ವಾಯುದಾಳಿ ಸೇರಿ ಹಲವು ಕಾರ್ಯಾಚರಣೆಗಳ ಸೂತ್ರಧಾರಿ ಅಜಿತ್ ದೋವಲ್‌ ಅವರನ್ನು ಮೂರನೇ ಅವಧಿಗೆ ನೇಮಿಸಿರುವ ಕುರಿತು ಸಂಪುಟದ ನೇಮಕಾತಿ ಸಮಿತಿಯು ಜೂನ್‌ 10ರಂದೇ ಆದೇಶ ಹೊರಡಿಸಿದೆ.

ನೂತನ ಆದೇಶದ ಪ್ರಕಾರ, ಅಜಿತ್‌ ದೋವಲ್‌ ಅವರು ನರೇಂದ್ರ ಮೋದಿ ಅವರು ಪ್ರಧಾನಿಯಾಗಿರುವವರೆಗೆ ಅಥವಾ ಮುಂದಿನ ಆದೇಶದವರೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಇರಲಿದ್ದಾರೆ. ಇದೇ ನಿಯಮವು ಪಿ.ಕೆ.ಮಿಶ್ರಾ ಅವರಿಗೂ ಅನ್ವಯವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅಜಿತ್‌ ದೋವಲ್‌ ಅವರು 1968ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿದ್ದು, ಕೇಂದ್ರ ಸರ್ಕಾರದ ಮಿಲಿಟರಿ, ಇಂಟಲಿಜೆನ್ಸ್‌ ಸೇರಿ ಹಲವು ವಿಭಾಗಗಳಲ್ಲಿ ಮಹತ್ವದ ಸಲಹೆ-ಸೂಚನೆ ನೀಡುತ್ತಾರೆ. ಇನ್ನು ಡಾ.ಪಿ.ಕೆ.ಮಿಶ್ರಾ ಅವರು 1972ರ ಬ್ಯಾಚ್‌ ಅಧಿಕಾರಿಯಾಗಿದ್ದು, ಪಿಎಂಒದ ಪ್ರಮುಖ ನೇಮಕಾತಿಗಳ ಉಸ್ತುವಾರಿ ನೋಡಿಕೊಳ್ಳುತ್ತಾರೆ. ಆಡಳಿತಾತ್ಮಕ ವಿಚಾರಗಳ ಹೊಣೆಯೂ ಇವರದ್ದೇ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

ಎನ್‌ಡಿಎ ಸಂಸದರಿಗೆ ಔತಣಕೂಟ ಏರ್ಪಡಿಸಿದ ಮೋದಿ, ಹಿಂದಿದೆಯಾ ಮಾಸ್ಟರ್‌ಪ್ಲಾನ್

ಬೆಳಗಾವಿ 31 ಕೃಷ್ಣ ಮೃಗಗಳ ಸಾವು ಪ್ರಕರ, ಕಾರಣ ಬಿಚ್ಚುಟ್ಟ ಈಶ್ವರ ಖಂಡ್ರೆ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments