Webdunia - Bharat's app for daily news and videos

Install App

ಬುಲಂದ್‌ಶಹರ್ ಅತ್ಯಾಚಾರ ಪೀಡಿತರಿಗೆ 3 ಲಕ್ಷ ಪರಿಹಾರ, ಫ್ಲಾಟ್ ಘೋಷಿಸಿದ ಅಖಿಲೇಶ್

Webdunia
ಶುಕ್ರವಾರ, 5 ಆಗಸ್ಟ್ 2016 (12:02 IST)
ದೇಶವನ್ನೇ ಬೆಚ್ಚಿ ಬೀಳಿಸಿದ ಬುಲಂದ್‌ಶಹರ್ ಸಾಮೂಹಿಕ ಅತ್ಯಾಚಾರದ ಬಲಿಪಶು ತಾಯಿ- ಮಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ 3 ಲಕ್ಷ ಧನ ಮತ್ತು ತಲಾ ಒಂದು ಫ್ಲಾಟ್‌ನ್ನು ಪರಿಹಾರವಾಗಿ ನೀಡಿದ್ದಾರೆ.

ಪ್ರಕರಣವನ್ನು ರಾಜಕೀಕರಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿರುವ ಅಖಿಲೇಶ್,  ಘಟನೆ ದುರದೃಷ್ಟಕರ, ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದ್ದು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಆದರೆ ತಲೆಮರೆಸಿಕೊಂಡಿರುವ ಗ್ಯಾಂಗ್ ಲೀಡರ್ ಸಲೀಮ್ ಬವ್ರಿಯಾನನ್ನು ಇನ್ನುವರೆಗೂ ಬಂಧಿಸಿಲ್ಲ.

ಶುಕ್ರವಾರ ರಾತ್ರಿ ನೊಯ್ಡಾದಿಂದ ಶಹಜಹಾರ್ಪುರದ ಕಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬವೊಂದನ್ನು ಅಡ್ಡಗಟ್ಟಿದ್ದ ದರೋಡೆಕೋರರ ಗುಂಪೊಂದು ಅದರಲ್ಲಿದ್ದ ಗಂಡಸರನ್ನು ಕಟ್ಟಿ ಹಾಕಿ 35 ವರ್ಷದ ಮಹಿಳೆ ಮತ್ತು ಆಕೆಯ 14 ವರ್ಷದ ಮಗಳನ್ನು ಎಳೆದೊಯ್ದು ಸಮೀಪದ ಹೊಲದಲ್ಲಿ ಸಾಮೂಹಿಕ ಅತ್ಯಾಚಾರಗೈದಿದ್ದರು. ಘಟನೆ ವಿರುದ್ಧ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಜೈಶ್‌ ಎ ಮೊಹಮ್ಮದ್ ಮುಖ್ಯಸ್ಥ ಮಸೂದ್‌ ಮಾವ ಮಟಾಶ್‌

Karnataka Monsoon rain: ರೈತರಿಗೆ ಗುಡ್‌ನ್ಯೂಸ್‌

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments