Webdunia - Bharat's app for daily news and videos

Install App

ದೆಹಲಿ ಅಖಾಢಕ್ಕೆ ಧುಮುಕಿದ ಅಖಿಲೇಶ್‌: ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಪ್ಲಾನ್‌

Sampriya
ಬುಧವಾರ, 15 ಜನವರಿ 2025 (17:14 IST)
Photo Courtesy X
ದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲಾ ಪಕ್ಷಗಳು ಬಿರುಸಿನ ಮತಬೇಟೆ ನಡೆಸುತ್ತಿವೆ. ಈ ಮಧ್ಯೆ ಸಮಾಜವಾದಿ ಪಕ್ಷ ಆಡಳಿತರೂಢ ಎಎಪಿ ಪಕ್ಷಕ್ಕೆ ಬೆಂಬಲ ಘೋಷಿಸಿದೆ.

ಬಿಜೆಪಿಯನ್ನು ಮಣಿಸಲಿಕ್ಕಾಗಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯವಾಗಿ ಪ್ರಬಲವಾಗಿರುವ ಆಮ್‌ ಆದ್ಮಿ ಪಕ್ಷಕ್ಕೆ (ಎಎಪಿ) ಬೆಂಬಲ ನೀಡುತ್ತೇವೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್‌ ಯಾದವ್‌ ಬುಧವಾರ ಇಲ್ಲಿ ಹೇಳಿದರು.

ಇಂಡಿಯಾ ಒಕ್ಕೂಟ ಅಖಂಡವಾಗಿದೆ ಎಂದು ಪ್ರತಿಪಾದಿಸಿದ ಎಸ್‌ಪಿ ವರಿಷ್ಠ, ದೆಹಲಿಯಲ್ಲಿ ಕಾಂಗ್ರೆಸ್‌ಗಿಂತ ಎಎಪಿ ಪ್ರಬಲವಾಗಿದೆ ಎನ್ನುವ ಮೂಲಕ ಕೈ ಪಕ್ಷಕ್ಕೂ ಟಾಂಗ್‌ ನೀಡಿದ್ದಾರೆ.

ಬಿಜೆಪಿ ವಿರುದ್ಧ ಹೋರಾಡುವ ಸಾಮರ್ಥ್ಯವಿದ್ದರೂ, ಆ ನೆಲದಲ್ಲಿ ಯಾವ ಪ್ರಾದೇಶಿಕ ಪಕ್ಷ ಪ್ರಬಲವಾಗಿರುತ್ತದೆ ಅದರ ಕೈ ಬಲಪಡಿಸುವುದೇ ಪ್ರತಿಪಕ್ಷಗಳ ಮೈತ್ರಿಕೂಟ ರಚನೆಯ ಹಿಂದಿನ ಮೂಲ ತತ್ವವಾಗಿದೆ. ಇದಕ್ಕೆ ಬದ್ಧವಾಗಿ ಎಎಪಿ ಬೆಂಬಲಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಕಾಂಗ್ರೆಸ್‌ ಪರಸ್ಪರ ಮುಖಾಮುಖಿಯಾಗುತ್ತಿವೆ. ಎಎಪಿ ಅಲ್ಲಿ ಪ್ರಬಲವಾಗಿರುವುದರಿಂದ ಮೈತ್ರಿಕೂಟದ ಎಲ್ಲ ಪಕ್ಷಗಳು ಆಮ್‌ ಆದ್ಮಿ ಪಕ್ಷವನ್ನೇ ಬೆಂಬಲಿಸಬೇಕು ಎಂಬುದು ನನ್ನ ಸಲಹೆ. ಬಿಜೆಪಿಯನ್ನು ಸೋಲಿಸುವುದೇ ನಮ್ಮೆಲ್ಲರ ಗುರಿ ಎಂದು ಹೇಳಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments