Webdunia - Bharat's app for daily news and videos

Install App

ಅಖಿಲೇಶ್- ರಾಹುಲ್ ಜಂಟಿ ರೋಡ್ ಶೋ

Webdunia
ಶನಿವಾರ, 4 ಫೆಬ್ರವರಿ 2017 (10:59 IST)
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶುಕ್ರವಾರ ಆಗ್ರಾದಲ್ಲಿ ಜಂಟಿ ರೋಡ್ ಶೋ ನಡೆಸಿ ತಮ್ಮ ಮೈತ್ರಿಕೂಟಕ್ಕಾಗಿ ಮತಯಾಚಿಸಿದ್ದಾರೆ. 

ಹಲವು ವರ್ಷಗಳಿಂದ ಅಖಿಲೇಶ್ ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಿದ್ದಾರೆ. ಮತ್ತೀಗ ನಾವಿಬ್ಬರು ಸೇರಿ ಉತ್ತರ ಪ್ರದೇಶದ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸುತ್ತೇವೆ ಎಂದ ರಾಹುಲ್, ಬಿಜೆಪಿ ಮತ್ತು ಮಾಯಾವತಿ ನೇತೃತ್ವದ ಬಿಎಸ್‌ಪಿ ವಿರುದ್ಧ ಹರಿಹಾಯ್ದರು. ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ ಅವರು ಉತ್ತರ ಪ್ರದೇಶದ ರಾಜಕಾರಣದಲ್ಲಿ ಬಿಎಸ್‌ಪಿ ಗೋಚರಿಸುತ್ತಿಲ್ಲವಾದ್ದರಿಂದ ಅದರ ಬಗ್ಗೆ ಕಮೆಂಟ್ ಮಾಡುವ ಅಗತ್ಯವಿಲ್ಲವೆಂದರು. 
 
ಕಳೆದವಾರ ಜಂಟಿಯಾಗಿ ಪತ್ರಿಕಾಗೋಷ್ಠಿ ನಡೆಸಿ ಬಳಿಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್-ಅಖಿಲೇಶ್,  ಬಿಜೆಪಿ ಮತ್ತು ಬಿಎಸ್‌ಪಿಯ ಹೆಡೆಮುರಿ ಕಟ್ಟಲು ನಾವು ಒಂದಾಗಿದ್ದೇವೆ ಎಂದಿದ್ದರು. 
 
ರ‍್ಯಾಲಿಗಳಲ್ಲಿ ಪರಷ್ಪರ ಒಬ್ಬರನೊಬ್ಬರು ಹೊಗಳಿಕೊಳ್ಳುತ್ತಿರುವ ದೋಸ್ತಿಗಳು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸರ್ವ ಪ್ರಯತ್ನಗಳನ್ನು ನಡೆಸಿದ್ದಾರೆ. ರಾಹುಲ್ ತಮ್ಮ ಮೈತ್ರಿಯನ್ನು ಗಂಗಾ ಮತ್ತು ಯಮುನಾ ನದಿಗಳ ಸಂಗಮಕ್ಕೆ ಹೋಲಿಸಿದ್ದರೆ, ಅಖಿಲೇಶ್ ಕೈ ಮತ್ತು ಎಸ್‌ಪಿ ಸೈಕಲ್‌ನ ಎರಡು ಚಕ್ರಗಳಂತೆ ಎಂದಿದ್ದಾರೆ. 
 
ಉತ್ತರ ಪ್ರದೇಶದಲ್ಲಿ ಫೆಬ್ರವರಿ 11 ರಿಂದ ಮಾರ್ಚ್ 8ರವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments