Webdunia - Bharat's app for daily news and videos

Install App

ಚುನಾವಣೆಗೆ ಮುನ್ನ ಪತ್ರಕರ್ತರ ಓಲೈಕೆಗೆ ಗೃಹನಿರ್ಮಾಣ ಯೋಜನೆ

Webdunia
ಸೋಮವಾರ, 29 ಆಗಸ್ಟ್ 2016 (19:03 IST)
ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಉತ್ತರಪ್ರದೇಶ ಸರ್ಕಾರ ಓಲೈಕೆ ತಂತ್ರದಲ್ಲಿ ಮುಳುಗಿದೆ. ಉತ್ತರಪ್ರದೇಶದ ಪತ್ರಕರ್ತರನ್ನು ಓಲೈಸಲು ಹೊಸ ಗೃಹನಿರ್ಮಾಣ ಯೋಜನೆಯನ್ನು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಕಟಿಸಿದ್ದಾರೆ. 
 
 ಸರ್ಕಾರಿ ಕ್ವಾರ್ಟರ್‌ಗಳಲ್ಲಿ ವಾಸಿಸುವ 500ಕ್ಕೂ ಹೆಚ್ಚು ಪತ್ರಕರ್ತರಿಗೆ 15 ದಿನಗಳಲ್ಲಿ ತೆರವು ಮಾಡುವಂತೆ ಸೂಚಿಸಿದ ಬಳಿಕ ಈ ಪ್ರಕಟಣೆ ಹೊರಬಿದ್ದಿದೆ. ಏಕ್ ಘರ್ ಹೊ ಅಪ್ನಾ ಕನಸನ್ನು ನನಸು ಮಾಡಲು ಈ ಯೋಜನೆಯನ್ನು ಪ್ರಕಟಿಸಿದ್ದು, ಸರ್ಕಾರದ ನಾಲ್ಕುವರೆ ವರ್ಷಗಳ ಅವಧಿಯಲ್ಲೇ ಇದು ಪ್ರಥಮ ಎಂದು ಅಖಿಲೇಶ್ ಹೇಳಿದರು. 
 
ರಾಜಸ್ಥಾನ ಮತ್ತು ಮಧ್ಯಪ್ರದೇಶಗಳೂ ಪತ್ರಕರ್ತರಿಗೆ ಗೃಹನಿರ್ಮಾಣ ಯೋಜನೆ ಪ್ರಕಟಿಸಿದ್ದವು. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ಅಖಿಲೇಶ್ ಗೃಹನಿರ್ಮಾಣ ಯೋಜನೆ ಪ್ರಕಟಿಸಿದ್ದು ಅನೇಕ ಮಂದಿಯ ಹುಬ್ಬೇರಿಸಿದೆ. ಪತ್ರಕರ್ತರ ಓಲೈಕೆ ಮೂಲಕ ಮಧುರ ಸಂಬಂಧ ಬೆಸೆಯುವ ಪ್ರಯತ್ನ ಎಂದು ವಿರೋಧ ಪಕ್ಷಗಳು ಈ ನಡೆಯನ್ನು ಭಾವಿಸಿವೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಳೇ ಗರ್ಲ್ ಫ್ರೆಂಡ್ ಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಮರ್ಮಾಂಗಕ್ಕೆ ಥಳಿಸಿ ಹಲ್ಲೆ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಮುಂದಿನ ಸುದ್ದಿ
Show comments