Webdunia - Bharat's app for daily news and videos

Install App

ಅಖಿಲೇಶ್ ಮುಂದಿನ ಸಿಎಂ: ಮುಲಾಯಂ

Webdunia
ಮಂಗಳವಾರ, 10 ಜನವರಿ 2017 (08:26 IST)
ತಮ್ಮ ಪುತ್ರ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಮುಂದಿನ ಮುಖ್ಯಮಂತ್ರಿ, ನಮ್ಮ ಪಕ್ಷದಲ್ಲಿ ಒಗ್ಗಟ್ಟಿದೆ ಎಂದು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ.
 
ಸಹೋದರ ಶಿವಪಾಲ್ ಸಿಂಗ್ ಮತ್ತು ಆಪ್ತ ಅಮರ್ ಸಿಂಗ್ ಜತೆ ನಿನ್ನೆ ಮಧ್ಯಾಹ್ನ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ನಮ್ಮ ಪಕ್ಷದಲ್ಲಿ ಒಗ್ಗಟ್ಟಿದ್ದು, ಸದ್ಯದಲ್ಲಿ ಜೊತೆಯಾಗಿ ಚುನಾವಣಾ ಪ್ರಚಾರವನ್ನು ಕೈಗೊಳ್ಳಲಿದ್ದೇವೆ ಎಂದಿದ್ದಾರೆ.
 
ಮುಂದುವರೆಸಿದ ಅವರು ನನ್ನ ಮತ್ತು ಅಖಿಲೇಶ್ ನಡುವೆ ಯಾವುದೇ ವಿವಾದವಿಲ್ಲ. ಪಕ್ಷದ ಬೆಳವಣಿಗೆಗೆ ಅಖಿಲೇಶ್ ಶ್ರಮ ಮಹತ್ವವಾದದ್ದು ಅತಿ ಸಣ್ಣ ವಿಷಯಕ್ಕೆ ಸಂಬಂಧಿಸಿದಂತೆ ನಮ್ಮೊಳಗಿದ್ದ ಪ್ರಶ್ನೆ ಈಗ ಮುಗಿದಿದೆ ಎಂದಿದ್ದಾರೆ. 
 
ಸೋದರ ಸಂಬಂಧಿ ರಾಮಗೋಪಾಲ್ ಅವರ ಹೆಸರೆತ್ತದೆ ಕಿಡಿಕಾರಿದ ಅವರು, ಕೇವಲ ಒಬ್ಬ ವ್ಯಕ್ತಿಯಿಂದಾಗಿ ಅಖಿಲೇಶ್ ದಾರಿ ತಪ್ಪುತ್ತಿದ್ದಾರೆ. ನಮ್ಮಲ್ಲಿನ ಸಮಸ್ಯೆಗಳು ಬಗೆಹರಿಯಲಿವೆ  ಎಂದು ಹೇಳುವುದರ ಮೂಲಕ ಪಕ್ಷದಲ್ಲಿನ ಭಿನ್ನಮತಗಳು ಮುಂದುವರೆದಿವೆ ಎಂಬುದನ್ನು ಸಹ ಒಪ್ಪಿಕೊಂಡಿದ್ದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments