Webdunia - Bharat's app for daily news and videos

Install App

ಅಖಿಲೇಶ್ ಅತ್ಯುತ್ತಮ ಸಿಎಂ, ಜನಪ್ರಿಯ ನಾಯಕರಲ್ಲ: ಅಮರ್ ಸಿಂಗ್

Webdunia
ಮಂಗಳವಾರ, 25 ಅಕ್ಟೋಬರ್ 2016 (16:02 IST)
ಉತ್ತರಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅತ್ಯುತ್ತಮ ಮುಖ್ಯಮಂತ್ರಿ. ಆದ್ರೆ ಇನ್ನೂ ಜನಪ್ರಿಯ ನಾಯಕರಲ್ಲ ಎಂದು ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಹೇಳಿದ್ದಾರೆ.
 
ಸಮಾಜವಾದಿ ಪಕ್ಷವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದೇನೆ ಎನ್ನುವ ಅಖಿಲೇಶ್ ಯಾದವ್ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ. 
 
ಅಖಿಲೇಶ್ ಯಾದವ್ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಅಭಿವೃದ್ಧಿ ಬಗ್ಗೆ ಅವರು ತೋರಿದ ಕಾಳಜಿ ಮನಮೆಚ್ಚುವಂತಹದು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
 
ಅವರೊಬ್ಬ ಜನಪ್ರಿಯ ನಾಯಕರಲ್ಲ ಎಂದು ನಾನು ಹೇಳಿಲ್ಲ. ಜನಪ್ರಿಯ ನಾಯಕರಾಗಲು ಸಮಯದ ಅಗತ್ಯವಿದೆ. ಅಖಿಲೇಶ್ ಯುವಕರಾಗಿದ್ದರಿಂದ, ಮುಲಾಯಂ ಸಿಂಗ್ ಅವರನ್ನು ನೋಡಿ ಕಲಿಯಬೇಕಾಗಿರುವುದು ಸಾಕಷ್ಟಿದೆ ಎಂದು ಅಭಿಪ್ರಾಯಪಟ್ಟರು.
 
ಆರು ವರ್ಷಗಳ ಉಚ್ಚಾಟನೆಯ ನಂತರ ಪ್ರಸಕ್ತ ವರ್ಷದ ಆರಂಭದಲ್ಲಿಯೇ ಸಮಾಜವಾದಿ ಪಕ್ಷದ ತೆಕ್ಕೆಗೆ ಬಂದ ಅಮರ್ ಸಿಂಗ್, ಸಮಾಜವಾದಿ ಪಕ್ಷದ ಬಿಕ್ಕಟ್ಟಿನ ಮೂಲ ರೂವಾರಿ ಎಂದು ಸಿಎಂ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.   
 
ಶಿವಪಾಲ್ ಯಾದವ್‌ಗೆ ಮುಖ್ಯಮಂತ್ರಿಯಾಗಿಸಲು ಅಮರ್ ಸಿಂಗ್ ಬೆಂಬಲ ನೀಡುತ್ತಿದ್ದಾರೆ ಎಂದು ಅಖಿಲೇಶ್ ಬೆಂಬಲಿಗರು ಆರೋಪಿಸಿದ್ದಾರೆ. ಶಿವಪಾಲ್ ಯಾದವ್ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿಸುವ ಹಿಂದೆ ಅಮರ್ ಸಿಂಗ್ ಕೈವಾಡವಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments