Webdunia - Bharat's app for daily news and videos

Install App

ಸೇನಾಪಡೆಗಳಿಂದ ಪಾಕಿಸ್ತಾನ ಮೂಲದ ಉಗ್ರನ ಬಂಧನ

Webdunia
ಬುಧವಾರ, 27 ಜುಲೈ 2016 (14:12 IST)
ಸೇನಾಪಡೆಗಳೊಂದಿಗೆ ನಡೆದ ಉಗ್ರರ ಎನ್‌ಕೌಂಟರ್‌ನಲ್ಲಿ ಉಗ್ರನೊಬ್ಬನನ್ನು ಜೀವಂತವಾಗಿ ಸೆರೆಹಿಡಿಯಲಾಗಿದ್ದು, ಸೆರೆಹಿಡಿದ ಉಗ್ರ ಪಾಕಿಸ್ತಾನ ಮೂಲದವನು ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
 
ಉಗ್ರ ಬಹಾದ್ದೂರ್ ಅಲಿ ಪಾಕಿಸ್ತಾನದ ಲಾಹೋರ್ ನಿವಾಸಿಯಾಗಿದ್ದಾನೆ ಎಂದು ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಹಂಸರಾಜ್ ಆಹಿರ್ ತಿಳಿಸಿದ್ದಾರೆ.
 
ಕುಪ್ವಾರಾ ಜಿಲ್ಲೆಯ ನೌಗಾಮ್ ಸೆಕ್ಟರ್‌ನಲ್ಲಿ ಸೇನಾಪಡೆಗಳು ಮತ್ತು ಲಷ್ಕರ್-ಎ-ತೊಯಿಬಾ ಸಂಘಟನೆಯ ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರು ಹತರಾಗಿದ್ದು ಒಬ್ಬನನ್ನು ಜೀವಂತವಾಗಿ ಸೆರೆಹಿಡಿಯಲಾಗಿತ್ತು.
 
22 ವರ್ಷ ವಯಸ್ಸಿನ ಬಹದ್ದೂರ್ ಅಲಿ ಅಲಿಯಾಸ್ ಸೈಫುಲ್ಲಾ ಲಷ್ಕರ್-ಎ-ತೊಯಿಬಾ ಉಗ್ರಗಾಮಿ ಸಂಘಟನೆಯ ಗೆರಿಲ್ಲಾ ಯುದ್ಧಧ ವಿಭಾಗದಲ್ಲಿ ತರಬೇತಿ ಪಡೆದಿದ್ದನು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ. 
 
ಉಗ್ರನಿಂದ ಮೂರು ಎಕೆ-47 ರೈಫಲ್‌ಗಳು ಮತ್ತು 23 ಸಾವಿರ ರೂಪಾಯಿಗಳನ್ನು ಭಾರತೀಯ ಕರೆನ್ಸಿಯನ್ನು ಸೇನಾಪಡೆಗಳು ವಶಕ್ಕೆ ತೆಗೆದುಕೊಂಡಿವೆ.   
 
ಕಳೆದ ಎರಡು ತಿಂಗಳುಗಳ ಅವಧಿಯಲ್ಲಿ ಸೇನಾಪಡೆಗಳು ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿವೆ. ಉಗ್ರರು ಪಾಕಿಸ್ತಾನ ಆಕ್ರಮಿತ ಕಾಶ್ಮಿರದ ತೀಥ್‌ವಾಲ್ ಪ್ರದೇಶದಿಂದ ಭಾರತದ ಗಡಿಯೊಳಗೆ ನುಸುಳಿದ್ದರು ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.
 
ಉಗ್ರರು ಮೊದಲು ತೀಥ್‌ವಾಲ್ ಪ್ರದೇಶದಿಂದ ತಂಗದಾರ್ ಸೆಕ್ಟರ್‌ಗೆ ತೆರಳಿದ್ದರು. ನಂತರ ಲೀಪಾ ಕಣಿವೆಯನ್ನು ಪ್ರವೇಶಿಸಿ ನಂತರ ಅರಣ್ಯ ಪ್ರದೇಶದೊಳಗೆ ಅಡಗಿದ್ದರು. ಉಗ್ರರು ಅರಣ್ಯದೊಳಗೆ ಅಡಗಿರುವ ಮಾಹಿತಿ ಪಡೆದ ಸೇನಾಪಡೆಗಳು ದಾಳಿ ನಡೆಸಿ ನಾಲ್ವರು ಉಗ್ರರನ್ನು ಹತ್ಯೆಗೈದಿದ್ದರು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments