Webdunia - Bharat's app for daily news and videos

Install App

ಅನ್ಯ ಜಾತಿ ಮದುವೆ : ರುಬ್ಬುವ ಕಲ್ಲಿನಿಂದ ಚಚ್ಚಿದ ತಂದೆ!

Webdunia
ಶನಿವಾರ, 19 ಫೆಬ್ರವರಿ 2022 (07:02 IST)
ಚೆನ್ನೈ : ಮಗಳು ಕೆಳಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎನ್ನುವ ಅವಮಾನ ತಾಳಲಾರದೆ ತಂದೆ ಮನೆಯವರನ್ನೆಲ್ಲ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ.

ಟೀ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣನ್ ತನ್ನ ಹಿರಿಯ ಮಗಳು ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕಾಗಿ ಮನನೊಂದಿದ್ದರು. ಹೀಗಾಗಿ ಅವರು ತಮ್ಮ ಹೆಂಡತಿ, ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದ ಅವರ ಮಗಳು ಈಗ ಪತಿಯೊಂದಿಗೆ ವಾಸಿಸುತ್ತಿದ್ದು, ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ ಎಂದು ನಾಗಪಟ್ಟಣಂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜಿ ಜವಾಹರ್ ಹೇಳಿದ್ದಾರೆ. 

ಮಗಳ ಮದುವೆ ವಿಚಾರವಾಗಿ ನೊಂದ ಲಕ್ಷ್ಮಣನ್ ರಾತ್ರಿ ವೇಳೆ ರುಬ್ಬುವ ಕಲ್ಲನ್ನು ತೆಗೆದುಕೊಂಡು ತನ್ನ ಪತ್ನಿ ಭುವನೇಶ್ವರಿ ಮತ್ತು ಇಬ್ಬರು ಕಿರಿಯ ಪುತ್ರಿಯರಾದ ವಿನೋತಿನಿ ಮತ್ತು ಅಕ್ಷಯ ಅವರನ್ನು ಬರ್ಬರವಾಗಿ ಕೊಂದಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಶವಗಳನ್ನು ಶವಪರೀಕ್ಷೆಗಾಗಿ ನಾಗಪಟ್ಟಣಂ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ನಾಗಪಟ್ಟಣಂ ಜಿಲ್ಲೆಯ ಎಸ್ಪಿ ಜವಾಹರ್ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments