Webdunia - Bharat's app for daily news and videos

Install App

ಅನ್ಯ ಜಾತಿ ಮದುವೆ : ರುಬ್ಬುವ ಕಲ್ಲಿನಿಂದ ಚಚ್ಚಿದ ತಂದೆ!

Webdunia
ಶನಿವಾರ, 19 ಫೆಬ್ರವರಿ 2022 (07:02 IST)
ಚೆನ್ನೈ : ಮಗಳು ಕೆಳಜಾತಿಯ ಯುವಕನನ್ನು ಮದುವೆಯಾಗಿದ್ದಾಳೆ ಎನ್ನುವ ಅವಮಾನ ತಾಳಲಾರದೆ ತಂದೆ ಮನೆಯವರನ್ನೆಲ್ಲ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ನಡೆದಿದೆ.

ಟೀ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣನ್ ತನ್ನ ಹಿರಿಯ ಮಗಳು ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕಾಗಿ ಮನನೊಂದಿದ್ದರು. ಹೀಗಾಗಿ ಅವರು ತಮ್ಮ ಹೆಂಡತಿ, ಮಕ್ಕಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯವರ ವಿರೋಧದ ನಡುವೆ ಮದುವೆಯಾಗಿದ್ದ ಅವರ ಮಗಳು ಈಗ ಪತಿಯೊಂದಿಗೆ ವಾಸಿಸುತ್ತಿದ್ದು, ಸುರಕ್ಷಿತವಾಗಿದ್ದಾರೆ ಎಂದಿದ್ದಾರೆ ಎಂದು ನಾಗಪಟ್ಟಣಂ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಜಿ ಜವಾಹರ್ ಹೇಳಿದ್ದಾರೆ. 

ಮಗಳ ಮದುವೆ ವಿಚಾರವಾಗಿ ನೊಂದ ಲಕ್ಷ್ಮಣನ್ ರಾತ್ರಿ ವೇಳೆ ರುಬ್ಬುವ ಕಲ್ಲನ್ನು ತೆಗೆದುಕೊಂಡು ತನ್ನ ಪತ್ನಿ ಭುವನೇಶ್ವರಿ ಮತ್ತು ಇಬ್ಬರು ಕಿರಿಯ ಪುತ್ರಿಯರಾದ ವಿನೋತಿನಿ ಮತ್ತು ಅಕ್ಷಯ ಅವರನ್ನು ಬರ್ಬರವಾಗಿ ಕೊಂದಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಶವಗಳನ್ನು ಶವಪರೀಕ್ಷೆಗಾಗಿ ನಾಗಪಟ್ಟಣಂ ಸರ್ಕಾರಿ ಜನರಲ್ ಆಸ್ಪತ್ರೆಗೆ ರವಾನಿಸಿದ್ದಾರೆ. ನಾಗಪಟ್ಟಣಂ ಜಿಲ್ಲೆಯ ಎಸ್ಪಿ ಜವಾಹರ್ ಸ್ಥಳಕ್ಕೆ ಭೇಟಿ ನೀಡಿ ತನಿಖೆಗೆ ಆದೇಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments