Webdunia - Bharat's app for daily news and videos

Install App

ಕಾಶ್ಮೀರಿ ಪಂಡಿತರಿಗೆ ಎಲ್ಲಾ ನೆರವು ನೀಡುತ್ತೇವೆ: ರಾಹುಲ್ ಗಾಂಧಿ ಭರವಸೆ

Webdunia
ಶನಿವಾರ, 11 ಸೆಪ್ಟಂಬರ್ 2021 (13:29 IST)
ನಿರಾಶ್ರಿತರಾಗಿರುವ ಕಾಶ್ಮೀರಿ ಪಂಡಿತರನ್ನು ಭೇಟಿ ಮಾಡಿದ ಕಾಂಗ್ರೆಸ್ ಅಗ್ರ ನಾಯಕ ರಾಹುಲ್ ಗಾಂಧಿ, ತಾವು ಹಾಗೂ ತಮ್ಮ ಕುಟುಂಬ ಸಹ ಇದೇ ಸಮುದಾಯಕ್ಕೆ ಸೇರಿದ್ದು, ಅವರಿಗೆ ಅಗತ್ಯವಿರುವ ಎಲ್ಲಾ ನೆರವನ್ನೂ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದೇ ವೇಳೆ ಆರ್ಎಸ್ಎಸ್ ಹಾಗೂ ಬಿಜೆಪಿ, ಜಮ್ಮು ಕಾಶ್ಮೀರದ ವೈವಿಧ್ಯಮಯ ಸಂಸ್ಕೃತಿಯನ್ನು ಹಾಳು ಮಾಡಲು ನೋಡುತ್ತಿದೆ ಎಂದು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಇದರಿಂದಾಗಿ ಕೇಂದ್ರಾಡಳಿತ ಪ್ರದೇಶದ ಜನತೆಯ ನಡುವಿನ ಭ್ರಾತೃತ್ವದ ಮನೋಭಾವ ಹಾಳಾಗುತ್ತಿದೆ ಎಂದಿದ್ದಾರೆ.
"ನಿಮಗೆ ಸಹಾಯ ಮಾಡಿ ತೋರುತ್ತೇನೆ, ನಾನು ಸುಳ್ಳು ಹೇಳುವುದಿಲ್ಲ ಎಂದು ನಾನು ಕಾಶ್ಮೀರಿ ಪಂಡಿತ ಸಹೋದರರಿಗೆ ತಿಳಿಸಿದ್ದೇನೆ" ಎಂದು ಶುಕ್ರವಾರ ನಡೆದ ಕಾಂಗ್ರೆಸ್ ಪಕ್ಷದ ಉನ್ನತ ಸಭೆಯೊಂದರ ವೇಳೆ ರಾಹುಲ್ ತಿಳಿಸಿದ್ದಾರೆ.
"ಇಂದು ಬೆಳಿಗ್ಗೆ ಕಾಶ್ಮೀರಿ ಪಂಡಿತ ಸಹೋದರರ ನಿಯೋಗವೊಂದು ನನ್ನ ಬಳಿ ಬಂದಿತ್ತು. ಅವರು ನನ್ನೊಂದಿಗೆ ಮಾತನಾಡುತ್ತಿದ್ದ ವೇಳೆ ನಾನೂ ಸಹ ಇದೇ ಸಮುದಾಯಕ್ಕೆ ಸೇರಿದವನು ಎಂದು ನೆನಪಾಯಿತು. ಹೀಗಾಗಿ ಅವರ ನೋವು ನನಗೂ ಅರಿವಾಗುತ್ತದೆ" ಎಂದು ರಾಹುಲ್ ತಿಳಿಸಿದ್ದಾರೆ.
"25 ಲಕ್ಷ ರೂಪಾಯಿ ಪರಿಹಾರ ನೀಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಭರವಸೆ ಇನ್ನೂ ಈಡೇರಿಲ್ಲ ಎಂದು ನನ್ನನ್ನು ಭೇಟಿ ಮಾಡಿದ ಕಾಶ್ಮೀರಿ ಪಂಡಿತರ ನಿಯೋಗ ತಿಳಿಸಿದೆ. ಕಾಶ್ಮೀರಿ ಪಂಡಿತರಿಗೆ ಪರಿಹಾರ ಘೋಷಣೆಯಾಗಿದ್ದು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ" ಎಂದಿದ್ದಾರೆ ರಾಹುಲ್.
"ಶ್ರೀನಗರದಲ್ಲಿ ನಾನು ಹೇಳಿದ್ದೆ; ಜಮ್ಮು ಮತ್ತು ಕಾಶ್ಮೀರಕ್ಕೆ ಆಗಮಿಸಿದಾಗೆಲ್ಲಾ ನಾನು ನನ್ನ ಮನೆಗೆ ಬಂದಿದ್ದೇನೆ ಎನಿಸುತ್ತದೆ. ನೆನ್ನೆ ನಾನು ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದೆ. ಈ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ನನ್ನ ಕುಟುಂಬದೊಂದಿಗೆ ಬಹಳ ಹಳೆಯ ನಂಟಿದೆ" ಎಂದ ರಾಹುಲ್, 13 ಕಿಮೀ ಪಾದಯಾತ್ರೆ ಮೂಲಕ ವೈಷ್ಣೋದೇವಿ ದೇವಸ್ಥಾನದ ಯಾತ್ರೆ ಪೂರೈಸಿದ್ದಾರೆ.
1990ರ ಆರಂಭದ ವರ್ಷಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಬಲವಾಗತೊಡಗಿದ ಬಳಿಕ ಕಾಶ್ಮೀರಿ ಪಂಡಿತರು ಕಣಿವೆಯಿಂದ ಭಾರೀ ಪ್ರಮಾಣದಲ್ಲಿ ವಲಸೆ ಹೋಗಬೇಕಾಗಿ ಬಂದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಭಾರತದಲ್ಲಿ ಇನ್ನು ಗಗನಯಾತ್ರೆಗೂ ಮೀಸಲಾತಿ ಬೇಕಂತೆ

ಅಂತಹ ಹೇಳಿಕೆಯನ್ನು ನಿರ್ಲಕ್ಷಿಸಿ: ರಾಜಣ್ಣ ಹೇಳಿಕೆಯನ್ನು ತಳ್ಳಿಹಾಕಿದ ಸಿಎಂ ಸಿದ್ದರಾಮಯ್ಯ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಮುಂದಿನ ಸುದ್ದಿ
Show comments