Select Your Language

Notifications

webdunia
webdunia
webdunia
webdunia

ಬಿಜೆಪಿಯ ಎಲ್ಲಾ ಮುಖಂಡರು ಕಳ್ಳರು - ರಾಹುಲ್ ಗಾಂಧಿ ಟ್ವೀಟ್

ಬಿಜೆಪಿಯ ಎಲ್ಲಾ ಮುಖಂಡರು ಕಳ್ಳರು - ರಾಹುಲ್ ಗಾಂಧಿ ಟ್ವೀಟ್
ನವದೆಹಲಿ , ಶನಿವಾರ, 23 ಮಾರ್ಚ್ 2019 (12:20 IST)
ನವದೆಹಲಿ : ಬಿಎಸ್ ಯಡಿಯೂರಪ್ಪ ಅವರ ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಎಲ್ಲಾ ಮುಖಂಡರು ಕಳ್ಳರು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.


ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ ಬಿಜೆಪಿ ಕೇಂದ್ರ ನಾಯಕರಿಗೆ 1,800 ಕೋಟಿ ರೂ. ಹಣ ವರ್ಗಾವಣೆ ಮಾಡಿದ ವಿಚಾರದ ಬಗ್ಗೆ ಇರುವ ಡೈರಿಯೊಂದನ್ನು ಬಿಡುಗಡೆ ಮಾಡಿದ್ದರು. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ 1 ಸಾವಿರ ಕೋಟಿ, ಅರುಣ್ ಜೇಟ್ಲಿ ಮತ್ತು ಗಡ್ಕರಿ ಅವರಿಗೆ 150 ಕೋಟಿ, ರಾಜನಾಥ್ ಸಿಂಗ್ ಅವರಿಗೆ 100 ಕೋಟಿ, ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರಿಗೆ 50 ಕೋಟಿ ರೂ., ನಿತಿನ್ ಗಡ್ಕರಿ ಮಗಳ ಮದುವೆಗೆ 10 ಕೋಟಿ, ತನ್ನ ವಿರುದ್ಧದ ಕೇಸ್‍ಗಳ ವಕಾಲತ್ತಿಗೆ 50 ಕೋಟಿ ರೂ. ಹಣವನ್ನು ಯಡಿಯೂರಪ್ಪ ನೀಡಿದ್ದಾರೆ ಎಂದು ಸುರ್ಜೆವಾಲಾ ಆರೋಪಿಸಿದ್ದಾರೆ.


ಈ ಡೈರಿ ವಿಚಾರದ ಬಗ್ಗೆ ಟ್ವಿಟರ್​​ನಲ್ಲಿ ಆಕ್ರೋಶ ಹೊರಹಾಕಿರುವ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ, ಬಿಜೆಪಿ ಮುಖಂಡರೆಲ್ಲರೂ ಕಳ್ಳರು. ಪ್ರಧಾನಿ ಮೋದಿ, ಪಾರ್ಟಿ ಅಧ್ಯಕ್ಷ ಅಮಿತ್​ ಶಾ ಹಾಗೂ ಗೃಹ ಸಚಿವ ರಾಜನಾಥ್​ ಸಿಂಗ್ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎಂದಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯತ್ತ ಮುಖ ಮಾಡಿದ ಮತ್ತೊಬ್ಬ ಕಾಂಗ್ರೆಸ್ ನಾಯಕ