Webdunia - Bharat's app for daily news and videos

Install App

ಬಿಜೆಪಿ ಮತ್ತೇ ಅಧಿಕಾರಕ್ಕೆ ಬಂದರೆ ಎಲ್ಲ ಸಿಎಂಗಳು ಜೈಲು ಸೇರುತ್ತಾರೆ: ಸಿಎಂ ಅರವಿಂದ್ ಕೇಜ್ರಿವಾಲ್

Sampriya
ಶನಿವಾರ, 11 ಮೇ 2024 (16:48 IST)
Photo Courtesy X
ನವದೆಹಲಿ: ದೇಶದಲ್ಲಿ 75 ವರ್ಷಗಳಿಂದ ಯಾವುದೇ ಪಕ್ಷವು ಈ ಪ್ರಮಾಣದಲ್ಲಿ ಕಿರುಕುಳ ನೀಡಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.

ಅಕ್ರಮ ಹಣ ವರ್ಗಾವಣೆ ಸಂಬಂಧ ಜೈಲು ಸೇರಿ, ಮಧ್ಯಂತರ ಜಾಮೀನು ಮೂಲಕ ಹೊರಬಂದಿರುವ ಅರವಿಂದ್ ಕೇಜ್ರಿವಾಲ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತೇನೆ ಎಂದು ಹೇಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿದ ಅವರು, ಆದರೆ ಎಲ್ಲ ಕಳ್ಳರೂ ಅವರ ಪಕ್ಷದಲ್ಲಿದ್ದಾರೆ ಎಂದು ಟೀಕಿಸಿದರು.

2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿಗಳಾದ ಮಮತಾ ಬ್ಯಾನರ್ಜಿ, ಎಂಕೆ ಸ್ಟಾಲಿನ್ ಸೇರಿದಂತೆ ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ ಎಂದರು.

75 ವರ್ಷಗಳಲ್ಲಿ ಬೇರೆ ಯಾವ ಪಕ್ಷವೂ ಈ ಮಟ್ಟಿಗೆ ಕಿರುಕುಳ ನೀಡಿಲ್ಲ, ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇನೆ ಎಂದು ಪ್ರಧಾನಿ ಹೇಳುತ್ತಿದ್ದಾರೆ ಆದರೆ ಎಲ್ಲಾ ಕಳ್ಳರು ತಮ್ಮ ಪಕ್ಷದಲ್ಲಿದ್ದಾರೆ" ಎಂದು ಅವರು ಕಿಡಿಕಾರಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚಿಸುವುದಿಲ್ಲ ಎಂದು ಪುನರುಚ್ಚರಿಸಿದ ಕೇಜ್ರಿವಾಲ್, "ಜೈಲಿನಿಂದ ಬಿಡುಗಡೆಯಾದ ನಂತರ ಕಳೆದ 20 ಗಂಟೆಗಳಲ್ಲಿ ನಾನು ಚುನಾವಣಾ ತಜ್ಞರು ಮತ್ತು ಜನರೊಂದಿಗೆ ಮಾತನಾಡಿದ್ದೇನೆ ಮತ್ತು ಬಿಜೆಪಿ ಸರ್ಕಾರ ರಚಿಸುವುದಿಲ್ಲ ಎಂದು ತಿಳಿದುಕೊಂಡಿರುವುದಾಗಿ" ಕೇಜ್ರಿವಾಲ್ ಹೇಳಿದರು.

"ಎಎಪಿ ಕೇಂದ್ರದಲ್ಲಿ ಸರ್ಕಾರದ ಭಾಗವಾಗಲಿದೆ. ನಾವು ದೆಹಲಿಗೆ ಸಂಪೂರ್ಣ ರಾಜ್ಯದ ಸ್ಥಾನಮಾನವನ್ನು ಪಡೆಯುತ್ತೇವೆ" ಎಂದು ಕೇಜ್ರಿವಾಲ್ ತಿಳಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments