Select Your Language

Notifications

webdunia
webdunia
webdunia
webdunia

ಪಕ್ಷ ಚಟುವಟಿಕೆ ಆರೋಪ: ಬಿಆರ್‌ಎಸ್ ಎಂಎಲ್‌ಸಿ ಕವಿತಾ ಬಿಗ್ ಶಾಕ್

BRS MLC ಕೆ ಕವಿತಾ

Sampriya

ನವದೆಹಲಿ , ಮಂಗಳವಾರ, 2 ಸೆಪ್ಟಂಬರ್ 2025 (16:18 IST)
Photo Credit X
ನವದೆಹಲಿ: ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದಡಿಯಲ್ಲಿ ಎಂಎಲ್‌ಸಿ ಕೆ ಕವಿತಾ ಅವರನ್ನು ಬಿಆರ್‌ಎಸ್‌ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ತಕ್ಷಣದಿಂದ ಜಾರಿಗೆ ಬರುವಂತೆ ಕವಿತಾ ಅವರನ್ನು ಅಮಾನತು ಮಾಡಿ ಬಿಆರ್‌ಎಸ್ ಪಕ್ಷದ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಆದೇಶ ಹೊರಡಿಸಿದ್ದಾರೆ. 

ಪಕ್ಷದ ಎಂಎಲ್‌ಸಿ ಕೆ. ಕವಿತಾ ಅವರ ಇತ್ತೀಚಿನ ನಡವಳಿಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳು ಬಿಆರ್‌ಎಸ್ ಪಕ್ಷಕ್ಕೆ ಹಾನಿಯಾಗುತ್ತಿರುವ ಕಾರಣ ಪಕ್ಷದ ನಾಯಕತ್ವವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. 

ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ತಕ್ಷಣದಿಂದಲೇ ಕೆ.ಕವಿತಾ ಅವರನ್ನು ಪಕ್ಷದಿಂದ ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ ಎಂದು ಬಿಆರ್‌ಎಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಪದಚ್ಯುತಿಗೆ ತಕ್ಷಣದ ಕಾರಣ ಕವಿತಾ ಅವರ ಸೋದರ ಸಂಬಂಧಿಗಳಾದ ಟಿ ಹರೀಶ್ ರಾವ್ ಮತ್ತು ಸಂತೋಷ್ ಕುಮಾರ್ ವಿರುದ್ಧ ಇತ್ತೀಚೆಗೆ ಹೇಳಿಕೆ ನೀಡಿರುವುದು. 

ಬಿಆರ್‌ಎಸ್ ಆಡಳಿತಾವಧಿಯಲ್ಲಿ ನಿರ್ಮಾಣವಾದ ಕಾಳೇಶ್ವರಂ ಯೋಜನೆಯಲ್ಲಿನ ಅವ್ಯವಹಾರದ ಬಗ್ಗೆ ಸಿಬಿಐ ತನಿಖೆಗೆ ರೇವಂತ್ ರೆಡ್ಡಿ ಸರ್ಕಾರ ನಿರ್ಧರಿಸಿದ್ದರಿಂದ ತಮ್ಮ ತಂದೆಗೆ ಮಾನಹಾನಿ ಮಾಡಲು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರೊಂದಿಗೆ ಮೌನ ತಿಳುವಳಿಕೆ ಇದೆ ಎಂದು ಕವಿತಾ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಬಲ ಭೂಕಂಪಕ್ಕೆ ಅಫ್ಘಾನಿಸ್ತಾನ ತತ್ತರ: ಹೆಚ್ಚುತ್ತಲೇ ಇದೇ ಮೃತರ ಸಂಖ್ಯೆ