Publish Date: Sat, 11 Sep 2021 (13:23 IST)
Updated Date: Sat, 11 Sep 2021 (13:26 IST)
ಕಲಬುರಗಿ : ಅತಂತ್ರ ಪರಿಸ್ಥಿತಿ ಉಂಟಾಗಿರುವ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ ಬಿಗ್ ಪ್ಲ್ಯಾನ್ ಮಾಡಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಜೆಡಿಎಸ್ ಪಕ್ಷದೊಂದಿಗೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ವಹಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ.
ಹೀಗಾಗಿ ಸಿಎಂ ಬೊಮ್ಮಾಯಿ ಅವರು ಜೆಡಿಎಸ್ ಜೊತೆಗೆ ಮಾತುಕತೆ ಸಕ್ಸಸ್ ಆದರೆ ಕಲಬುರಗಿ ಮಹಾನಗರ ಪಾಲಿಕೆ ಮೇಯರಸ್ ಸ್ಥಾನ ಬಿಜೆಪಿಗೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.