Webdunia - Bharat's app for daily news and videos

Install App

ಅಮರನಾಥ್ ಯಾತ್ರಿಗಳ ಮೇಲೆ ಮತ್ತಷ್ಟು ದಾಳಿ ಸಾಧ್ಯತೆ...!

Webdunia
ಮಂಗಳವಾರ, 11 ಜುಲೈ 2017 (20:26 IST)
ಅಮರನಾಥ್ ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಮಾಸುವ ಮುನ್ನವೇ ಉಗ್ರರು ಮತ್ತಷ್ಟು ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಉತ್ತರಪ್ರದೇಶ ಮತ್ತು ಗುಜರಾತ್ ಮಹಿಳಾ ಯಾತ್ರಿಕರು ಉಗ್ರರ ಪ್ರಮುಖ ಟಾರ್ಗೆಟ್ ಆಗಿದ್ದಾರೆ. ಭಯೋತ್ಪಾದಕರು ಮತ್ತಷ್ಟು ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಅಧಿಕಾರಿಗಳು, ಗೃಹ ಸಚಿವಾಲಯಕ್ಕೆ ಮಾಹಿತಿ ರವಾನಿಸಿದ್ದಾರೆ.
 
ನಿನ್ನೆ ಉಗ್ರರು ನಡೆಸಿದ ದಾಳಿಯಲ್ಲಿ ಏಳು ಮಂದಿ ಯಾತ್ರಿಕರು ಹತ್ಯೆಯಾಗಿದ್ದು 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಹತ್ಯೆಯಾದವರಲ್ಲಿ ಐವರು ಗುಜರಾತ್ ರಾಜ್ಯಕ್ಕೆ ಸೇರಿದವರಾಗಿದ್ದರೆ ಇಬ್ಬರು ಮಹಾರಾಷ್ಟ್ರ ಮೂಲದವರಾಗಿದ್ದಾರೆ.
 
ಉಗ್ರರ ದಾಳಿಯಲ್ಲಿ ಹತ್ಯೆಯಾದವರ ಕುಟುಂಬಕ್ಕೆ 10 ಲಕ್ಷ ರೂಪಾಯಿ, ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಘೋಷಿಸಿದ್ದಾರೆ.  
 
ಅಮರನಾಥ್ ಯಾತ್ರೆಗೆ ಭಾರಿ ಸೇನಾ ಬಂದೋಬಸ್ತ್ ವಹಿಸಲಾಗಿದ್ದರೂ ಉಗ್ರರ ಉಪಟಳ ನಿರಂತರವಾಗಿ ಮುಂದುವರಿದಿದೆ. ಉಗ್ರರನ್ನು ಸದೆಬಡೆಯಲು ಕೇಂದ್ರ ಗೃಹ ಸಚಿವಾಲಯ ಇಂದು ನಡೆದ ಸಭೆಯಲ್ಲಿ ಐದು ಪ್ರಮುಖ ರಣತಂತ್ರಗಳನ್ನು ರೂಪಿಸಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಡಾನ್‌ನಲ್ಲಿ ಭಯಾನಕ ಭೂಕುಸಿತ: ಗ್ರಾಮವೇ ಸರ್ವನಾಶ, ಸಾವಿರಾರು ಮಂದಿ ಸಾವು

ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮುಂದಿನ ಸುದ್ದಿ
Show comments