Webdunia - Bharat's app for daily news and videos

Install App

ಅಮಿತ್ ಶಾಗೆ ಕೇಜ್ರಿವಾಲ್ ಹೆಸರು ಹೇಳುವ ಯೋಗ್ಯತೆಯೂ ಇಲ್ಲ: ಸಿಸೋಡಿಯಾ

Webdunia
ಶನಿವಾರ, 8 ಅಕ್ಟೋಬರ್ 2016 (16:08 IST)
ಪಾಕ್ ಆಕ್ರಮಿತ ಕಾಶ್ಮಿರದಲ್ಲಿ ನಡೆದ ಸೀಮಿತ ದಾಳಿಯ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರುತ್ತಿವೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಆಪ್, ಅಮಿತ್ ಶಾ ಅಪರಾಧ ಹಿನ್ನೆಲೆಯ ವ್ಯಕ್ತಿ ಎನ್ನುವುದು ದೇಶಕ್ಕೆ ಗೊತ್ತಿದೆ. ಇದೀಗ ಅವರು ದೇಶಭಕ್ತಿಯ ಪಾಠ ಕಲಿಸುತ್ತಿದ್ದಾರೆ ಎಂದು ಕಿಡಿಕಾರಿದೆ.  
 
ದೇಶಭಕ್ತಿಯ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಕ್ಕದಲ್ಲಿ ನಿಲ್ಲಲು ಯೋಗ್ಯತೆ ಇಲ್ಲದ ಅಮಿತ್ ಶಾ ರಾಷ್ಟ್ರಭಕ್ತಿಯ ಮಾತುಗಳನ್ನು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
 
ಅಮಿತ್ ಶಾಗೆ ಯಾವುದೇ ರಾಜಕೀಯ ಮೌಲ್ಯಗಳಿಲ್ಲ. ಕೇಜ್ರಿವಾಲ್ ಹೆಸರನ್ನು ಎತ್ತುವುದಕ್ಕೂ ಯೋಗ್ಯತೆಯಿಲ್ಲ. ಗುಜರಾತ್‌ನಲ್ಲಿ ಹತ್ಯೆ ಆರೋಪಗಳನ್ನು ಎದುರಿಸಿರುವ ಬಗ್ಗೆ ದೇಶಕ್ಕೆ ಗೊತ್ತಿದೆ ಎಂದು ಲೇವಡಿ ಮಾಡಿದೆ. 
 
ಅಪರಾಧ ಹಿನ್ನೆಲೆಯ ವ್ಯಕ್ತಿ ದೇಶಭಕ್ತಿ ಮತ್ತು ಪ್ರಾಮಾಣಿಕತೆಯ ಪ್ರಮಾಣ ಪತ್ರ ವಿತರಿಸುತ್ತಿರುವುದು ಅಚ್ಚರಿ ತಂದಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
 
ಅಮಿತ್ ಶಾ ಸೋಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಹತ್ಯೆ ಆರೋಪಗಳನ್ನು ಎದುರಿಸಿದ್ದರು. ನಂತರ ಡಿಸೆಂಬರ್ 30, 2014ರಲ್ಲಿ ಕೋರ್ಟ್ ನಿರಪರಾಧಿ ಎಂದು ಖುಲಾಸೆಗೊಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments