Webdunia - Bharat's app for daily news and videos

Install App

ಕೇಜ್ರಿವಾಲ್ ಹೆಸರು ಉಚ್ಛರಿಸೋ ಅರ್ಹತೆ ಶಾಗಿಲ್ಲ: ಆಪ್

Webdunia
ಶನಿವಾರ, 8 ಅಕ್ಟೋಬರ್ 2016 (18:21 IST)
ಸೀಮಿತ ದಾಳಿಗೆ ಸಂಬಂಧಿಸಿದಂತೆ ಆಪ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ಮುಂದುವರೆದಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಕಿಡಿಕಾರಿರುವ ಆಪ್,  ಕ್ರಿಮಿನಲ್ ಇತಿಹಾಸ ಹೊಂದಿರುವ ಅಮಿತ್ ಶಾರಿಂದ ದೇಶಭಕ್ತಿ ಪ್ರಮಾಣಪತ್ರ ಬೇಡ ಎಂದು ಹೇಳಿದೆ. 

ಅಮಿತ್ ಶಾ ಅವರ ಅಪರಾಧಿಕ ಇತಿಹಾಸವನ್ನು ಸಂಪೂರ್ಣ ದೇಶ ತಿಳಿದಿದೆ. ಮತ್ತೀಗ ಅವರು ದೇಶಭಕ್ತಿ ಪ್ರಮಾಣಪತ್ರವನ್ನು ನೀಡುತ್ತಿದ್ದಾರೆ. ರಾಷ್ಟ್ರೀಯತೆ ವಿಷಯದಲ್ಲಿ  ಶಾ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರ ಪಕ್ಕದಲ್ಲಿ ನಿಲ್ಲಲು ಸಹ ಅರ್ಹರಲ್ಲ ಎಂದು ಆಪ್ ಕಿಚಾಯಿಸಿದೆ. 
 
ಅಮಿತ್ ಶಾ ರಾಜಕೀಯ ಮೌಲ್ಯಗಳ ಮೇಲೆ ಮೊಡವೆ ಇದ್ದಂತೆ. ಕೇಜ್ರಿವಾಲ್ ಹೆಸರು ಹೇಳುವ ಅರ್ಹತೆ ಕೂಡ ಅವರಿಗಿಲ್ಲ. ಸಂಪೂರ್ಣ ದೇಶಕ್ಕೆ ಅವರ ಕ್ರಿಮಿನಲ್ ಇತಿಹಾಸದ ಬಗ್ಗೆ ಗೊತ್ತು. ಕೊಲೆ ಆರೋಪವನ್ನು ಹೊತ್ತಿದ್ದ ಅವರನ್ನು ಗುಜರಾತಿನಿಂದ ಹೊರ ದಬ್ಬಲಾಯಿತು. ಎಂದು ದೆಹಲಿ ಉಪಮುಖ್ಯಮಂತ್ರಿ, ಆಪ್ ನಾಯಕ ಮನೀಶ್ ಸಿಸೋಡಿಯಾ ಟೀಕಿಸಿದ್ದಾರೆ. 
 
ಅಮಿತ್ ಶಾ ದೇಶಭಕ್ತಿಯ ಪ್ರಮಾಣಪತ್ರವನ್ನು ನೀಡುತ್ತಾರೆನ್ನುವುದು ನನಗೆ ಆಶ್ಚರ್ಯವನ್ನು ತರಿಸಿದೆ ಎಂದು ಸಿಸೋಡಿಯಾ ಹೇಳಿದ್ದಾರೆ. 
 
ಅಮಿತ್ ಶಾ ಸೋಹ್ರಾಬುದ್ದೀನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಹತ್ಯೆ ಆರೋಪಗಳನ್ನು ಎದುರಿಸಿದ್ದರು. ನಂತರ ಡಿಸೆಂಬರ್ 30, 2014ರಲ್ಲಿ ಕೋರ್ಟ್ ನಿರಪರಾಧಿ ಎಂದು ಅವರನ್ನು ಖುಲಾಸೆಗೊಳಿಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments