ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

Sampriya
ಶುಕ್ರವಾರ, 22 ಆಗಸ್ಟ್ 2025 (19:13 IST)
ಕೊಚ್ಚಿ: ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಗಂಭೀರ ಆರೋಪ ಮಾಡಿದ್ದಾರೆ. 

ಅವರು ಮಲಯಾಳ ಮನೋರಮಾ ಸಮೂಹ ಶುಕ್ರವಾರ ಆಯೋಜಿಸಿದ್ದ ಮನೋರಮಾ ನ್ಯೂಸ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‌ಸುದರ್ಶನ್ ರೆಡ್ಡಿ ಅವರು ಎಡಪಂಥೀಯ ಉಗ್ರವಾದ ಮತ್ತು ನಕ್ಸಲಿಸಂ ಬೆಂಬಲಿಸುವ ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ ದೇಶದಲ್ಲಿ 2020ಕ್ಕೂ ಮೊದಲೇ ಎಡಪಂಥಿಯ ಚಳುವಳಿ ಅಂತ್ಯವಾಗುತ್ತಿತ್ತು ಎಂದರು. 

ಸುಪ್ರೀಂಕೋರ್ಟ್‌ನಂತಹ ವೇದಿಕೆಯನ್ನು ಬಳಸಿಕೊಂಡು ಎಡಪಂಥೀಯ ಉಗ್ರವಾದ ಮತ್ತು ನಕ್ಸಲ್‌ವಾದವನ್ನು ಬೆಂಬಲಿಸಿದ ಸುದರ್ಶನ್ ರೆಡ್ಡಿಯನ್ನು ಕಾಂಗ್ರೆಸ್ ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಆದರೆ ಕೇರಳ ನಕ್ಸಲಿಸಂನ ಪರಿಣಾಮ ಅನುಭವಿಸಿದೆ. ಹೀಗಾಗಿ ಕೇರಳದಲ್ಲಿ ಪಕ್ಷದ ಗೆಲುವಿನ ಸಾಧ್ಯತೆ ಮತ್ತಷ್ಟು ಕಡಿಮೆಯಾಗಿದೆ ಎಂದು ಅಮಿತ್ ಶಾ ಹೇಳಿದರು.

ನಕ್ಸಲ್ ವಾದಕ್ಕೆ ಸಹಾಯ ಮಾಡಿದ ಸುದರ್ಶನ್ ರೆಡ್ಡಿ ಅವರು ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ, 2020 ರ ವೇಳೆಗೆ ನಕ್ಸಲ್ ಭಯೋತ್ಪಾದನೆ ಕೊನೆಗೊಳ್ಳುತ್ತಿತ್ತು. ಅವರು ಸಾಲ್ವಾ ಜುಡುಮ್ ತೀರ್ಪು ನೀಡಿದ ಸಿದ್ಧಾಂತದಿಂದ ಪ್ರೇರಿತರಾದ ವ್ಯಕ್ತಿ ಎಂದು ಕಿಡಿಕಾರಿದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

ಮುಂದಿನ ಸುದ್ದಿ
Show comments