Webdunia - Bharat's app for daily news and videos

Install App

ಪಾಕಿಸ್ತಾನಿಯರನ್ನು ಗುರುತಿಸಿ, ಅವರ ದೇಶಕ್ಕೇ ಕಳುಹಿಸಿ: ಎಲ್ಲಾ ಮುಖ್ಯಮಂತ್ರಿಗಳಿಗೆ ಅಮಿತ್ ಶಾ ಆದೇಶ

Krishnaveni K
ಶುಕ್ರವಾರ, 25 ಏಪ್ರಿಲ್ 2025 (15:18 IST)
ನವದೆಹಲಿ: ನಿಮ್ಮ ನಿಮ್ಮ ರಾಜ್ಯಗಳಲ್ಲಿ ಪಾಕಿಸ್ತಾನಿಯರು ಯಾರಿದ್ದಾರೆ ಎಂದು ಗುರುತಿಸಿ, ಅವರನ್ನು ತಕ್ಷಣವೇ ಅವರ ದೇಶಕ್ಕೆ ವಾಪಸ್ ಕಳುಹಿಸಿ ಎಂದು ಗೃಹಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.

ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ಬಳಿಕ ಕೇಂದ್ರ ಸರ್ಕಾರ ನಮ್ಮ ದೇಶದಲ್ಲಿರುವ ಪಾಕಿಸ್ತಾನಿಯರಿಗೆ ತಕ್ಷಣವೇ ದೇಶ ಬಿಟ್ಟು ಹೊರಡಲು ಸೂಚನೆ ನೀಡಿತ್ತು. ಇದಕ್ಕೆ 48 ಗಂಟೆಗಳ ಗಡುವೂ ನೀಡಿತ್ತು. ಹಾಗಿದ್ದರೂ ಕೆಲವು ಕಡೆ ಇನ್ನೂ ಹಲವು ನೆಪ ಹೇಳಿಕೊಂಡು ಪಾಕಿಸ್ತಾನಿಯರು ಇಲ್ಲೇ ಬಾಕಿಯಿದ್ದಾರೆ.

ಅಂತಹವರನ್ನು ಅವರ ದೇಶಕ್ಕೇ ಕಳುಹಿಸಿ ಎಂದು ಅಮಿತ್ ಶಾ ಆದೇಶ ನೀಡಿದ್ದಾರೆ.
ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನಕ್ಕೆ ತಕ್ಕ ಏಟು ಕೊಡಲು ಭಾರತ ಸರ್ಕಾರ ನಿರ್ಧರಿಸಿದ್ದು ಅದರ ಅಂಗವಾಗಿ ಪಾಕಿಸ್ತಾನಿಯರಿಗೆ ಭಾರತ ಪ್ರವೇಶ ನಿರಾಕರಿಸಿದೆ.

ಈಗಾಗಲೇ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡಲಾಗಿದ್ದರೆ ಅದು ಏಪ್ರಿಲ್ 27 ರ ನಂತರ ಅಧಿಕೃತವಾಗಿ ರದ್ದಾಗಲಿದೆ ಎಂದು ಈಗಾಗಲೇ ವಿದೇಶಾಂಗ ಇಲಾಖೆ ಸೂಚನೆ ನೀಡಿದೆ. ಮೆಡಿಕಲ್ ವೀಸಾದಡಿ ಭಾರತಕ್ಕೆ ಬಂದಿದ್ದರೆ ಏಪ್ರಿಲ್ 29 ರವರೆಗೆ ಮಾತ್ರ ಅನುಮತಿಯಿರಲಿದೆ.  ಹೀಗಾಗಿ ಈಗ ಗೃಹಸಚಿವರು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ಪಾಕಿಸ್ತಾನಿಯರನ್ನು ತೆರವುಗೊಳಿಸಲು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೋ ಮಾಜಿ ಅಧ್ಯಕ್ಷ, ಬೆಂಗಳೂರಿನ ಕಸ್ತೂರಿ ರಂಗನ್ ಇನ್ನಿಲ್ಲ, ಇವರ ಸಾಧನೆ ಹೀಗಿದೆ

CET Exam ಜನಿವಾರ ಪ್ರಕರಣ: ವಿದ್ಯಾರ್ಥಿ ಸಚಿವ್ರತ್ ಕುಲಕರ್ಣಿಗೆ ಬಿಗ್ ಆಫರ್ ಕೊಟ್ಟ ಸಚಿವರು

Pehalgam: ಪಹಲ್ಗಾಮ್ ದಾಳಿಯಲ್ಲಿ ಗಾಯಗೊಂಡವರಿಗಾಗಿ ಹಗಲು ರಾತ್ರಿ ಚಿಕಿತ್ಸೆ ನೀಡಿದ ವೈದ್ಯ ಹೀರೋಗಳು ಇವರೇ ನೋಡಿ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

ಮುಂದಿನ ಸುದ್ದಿ
Show comments