Webdunia - Bharat's app for daily news and videos

Install App

ತೆಲಂಗಾಣದ ಸರಕಾರ ಭ್ರಷ್ಟ ಸರಕಾರ: ಅಮಿತ್ ಶಾ ವಾಗ್ದಾಳಿ

Webdunia
ಭಾನುವಾರ, 18 ಸೆಪ್ಟಂಬರ್ 2016 (13:23 IST)
ತೆಲಂಗಾಣದಲ್ಲಿರುವ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಸರಕಾರ ದೇಶದಲ್ಲಿಯೇ ಭ್ರಷ್ಟ ಸರಕಾರವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ. 
 
ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿಗೆ ಹೆದರಿ ಅಧಿಕೃತವಾಗಿ ಹೈದ್ರಾಬಾದ್ ವಿಮೋಚನಾ ದಿನಾಚರಣೆ ಆಚರಿಸಲು ಸರಕಾರ ಹಿಂದೇಟು ಹಾಕಿದೆ. ಕೆಸಿಆರ್ ಅವರೇ ಓವೈಸಿ ನಿಮ್ಮನ್ನು ಮುಖ್ಯಮಂತ್ರಿಯಾಗಿ ಮಾಡಿಲ್ಲ. ತೆಲಂಗಾಣದ ಜನತೆ ನಿಮ್ಮನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎನ್ನುವುದು ಮರೆಯಬೇಡಿ ಎಂದು ಟೀಕಿಸಿದ್ದಾರೆ.  
 
ಹೈದ್ರಾಬಾದ್ ವಿಮೋಚನಾ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಾ, ಕೇಂದ್ರ ಸರಕಾರ ನೀಡಿದ 90 ಸಾವಿರ ಕೋಟಿ ರೂಪಾಯಿಗಳನ್ನು ಇತರ ಪಕ್ಷಗಳ ಶಾಸಕರನ್ನು ಖರೀದಿಸಲು ಟಿಆರ್‌ಎಸ್ ವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದರು.  
 
ನಿಜಾಮನ ಕಪಿಮುಷ್ಟಿಯಿಂದ ಸ್ವಾತಂತ್ರ್ಯಗೊಳಿಸಿದ ಹೋರಾಟಗಾರರಿಗೆ ಗೌರವ ನೀಡುತ್ತಿಲ್ಲ. ಓಟ್‍‌ಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ಓಲೈಸುತ್ತಿದೆ. ಬಿಜೆಪಿ ಯಾರಿಗೂ ಹೆದರುವುದಿಲ್ಲ. ಮುಂಬರುವ 2019ರ ಚುನಾವಣೆಯಲ್ಲಿ ಜಯಗಳಿಸಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ವಿಮೋಚನಾ ದಿನವನ್ನು ಅಧಿಕೃತವಾಗಿ ಆಚರಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments