Webdunia - Bharat's app for daily news and videos

Install App

ಜೆಎನ್‌ಯು ವಿವಾದಕ್ಕೆ ಸಾಥ್ ನೀಡಿದ್ದಕ್ಕೆ ರಾಹುಲ್ ಕ್ಷಮೆ ಕೇಳಬೇಕು: ಅಮಿತ್ ಶಾ

Webdunia
ಮಂಗಳವಾರ, 16 ಫೆಬ್ರವರಿ 2016 (15:03 IST)
ರಾಷ್ಟ್ರೀಯತೆ ಮತ್ತು ರಾಷ್ಟ್ರವಿರೋಧಿ ಕುರಿತಂತೆ ಎದ್ದಿರುವ ಚರ್ಚೆಗೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ನಡುವೆ ನಡೆಯುತ್ತಿರುವ ವಾಕ್ಸಮರ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. 

ನಿನ್ನೆ ತಾನೆ ರಾಹುಲ್ ಗಾಂಧಿ ಅವರು ಜೆಎನ್‌ಯುದಲ್ಲಿ ನಡೆದಿರುವ ಪ್ರತಿಭಟನೆಗಳನ್ನು ಬೆಂಬಲಿಸುವ ಮೂಲಕ ದೇಶದ್ರೋಹಿಗಳ ಬೆನ್ನಿಗೆ ನಿಂತಿದ್ದಾರೆ ಎಂದು ಕಿಡಿಕಾರಿದ್ದ ಶಾ ಇಂದು ಅವರ ಪರ ನಿಂತಿದ್ದಕ್ಕಾಗಿ ರಾಹುಲ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. 
 
ಅಭಿವ್ಯಕ್ತಿ ಸ್ವಾತಂತ್ರ್ಯ ಎಂದರೆ ಕಾಂಗ್ರೆಸ್‌ಗೆ  ದೇಶ ವಿಭಜನೆಗೆ ಬೆಂಬಲ ನೀಡುವುದು ಎನ್ನಿಸುತ್ತದೆ ಎಂದು ಶಾ ಕಿಡಿಕಾರಿದ್ದಾರೆ.
 
ಈ ವಿವಾದವನ್ನು ಮುಂಬರುವ ವಿಧಾನಸಭಾ ಚುನಾವಣೆಗಳ ಪ್ರಚಾರಕ್ಕೆ ಸಹ ಬಳಸಿಕೊಳ್ಳುತ್ತೇವೆ ಎಂದಿರುವ ಬಿಜೆಪಿ ಕಾಂಗ್ರೆಸ್ ಮತಬ್ಯಾಂಕ್ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿದೆ. 
 
ದೇಶ ವಿರೋಧಿ ಮತ್ತು ಅಫ್ಜಲ್ ಗುರು ಪರವಾದ ಘೋಷಣೆಗಳನ್ನು ಕೂಗುವುದು ರಾಷ್ಟ್ರದ್ರೋಹದ ಕೆಲಸ. ದೇಶದ ಯಾವುದೇ ಭಾಗದಲ್ಲಿ ಇಂತಹ ಘಟನೆಗಳು ಮರುಕಳಿಸಲು ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಶಾ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments