Publish Date: Mon, 02 Mar 2020 (06:46 IST)
Updated Date: Mon, 02 Mar 2020 (06:48 IST)
ಕೋಲ್ಕತ್ತಾ: ರಾಮ ಮಂದಿರ ನಿರ್ಮಾಣಕ್ಕೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ತಡೆಯೊಡ್ಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪ ಮಾಡಿದ್ದಾರೆ.
ಕೋಲ್ಕತ್ತಾದಲ್ಲಿ ‘ನಾವು ಅನ್ಯಾಯವನ್ನು ಸಹಿಸುವುದಿಲ್ಲ’ ಎಂಬ ಅಭಿಯಾನವನ್ನುದ್ದೇಶಿಸಿ ಮಾತನಾಡಿದ ಅವರು, ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್, ಎಸ್ ಪಿ, ಬಿಎಸ್ ಪಿ, ಎಡಪಂಥೀಯರೊಂದಿಗೆ ಸೇರಿ ರಾಮ್ ಮಂದಿರ ನಿರ್ಮಾಣ ಮಾಡುವುದನ್ನು ವಿರೋಧಿಸಿದ್ದಾರೆ. ಅಷ್ಟೇ ಅಲ್ಲದೇ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ್ದಕ್ಕೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ವಿರೋಧ ವ್ತಕ್ತಪಡಿಸಿದ್ದಾರೆ ಎಂದು ದೂರಿದ್ದಾರೆ.