Webdunia - Bharat's app for daily news and videos

Install App

ತಮಿಳುನಾಡು ಬಿಜೆಪಿ ನಾಯಕಿ ತಮಿಳ್ ಸಾಯಿಗೆ ವೇದಿಕೆಯಲ್ಲೇ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

Krishnaveni K
ಬುಧವಾರ, 12 ಜೂನ್ 2024 (16:44 IST)
ವಿಜಯವಾಡ: ಆಂಧ್ರಪ್ರದೇಶದಲ್ಲಿ ಇಂದು ಸಿಎಂ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ವೇದಿಕೆಯಲ್ಲೇ ತಮಿಳುನಾಡಿನ ಬಿಜೆಪಿ ನಾಯಕಿ, ಮಾಜಿ ರಾಜ್ಯ ಪಾಲೆ ತಮಿಳ್ ಸಾಯಿ ಸೌಂದರರಾಜನ್ ಮೇಲೆ ಗರಂ ಆದ ಘಟನೆ ನಡೆದಿದೆ.

ಚಂದ್ರಬಾಬು ನಾಯ್ಡು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಎಲ್ಲಾ ಘಟಾನುಘಟಿ ನಾಯಕರೂ ಪಾಲ್ಗೊಂಡಿದ್ದರು. ಎಲ್ಲರನ್ನೂ ವೇದಿಕೆಯ ಮೇಲೆ ಕೂರಿಸಲಾಗಿತ್ತು. ಈ ವೇಳೆ ಅಲ್ಲಿಗೆ ತಮಿಳ್ ಸಾಯಿ ಆಗಮಿಸಿ ಎಲ್ಲಾ ನಾಯಕರಿಗೂ ವಂದಿಸುತ್ತಿದ್ದರು.

ಈ ವೇಳೆ ತಮಿಳ್ ಸಾಯಿ ಅವರನ್ನು ಪಕ್ಕಕ್ಕೆ ಕರೆದ ಅಮಿತ್ ಶಾ ವೇದಿಕೆಯಲ್ಲೇ ಖಡಕ್ ಆಗಿ ಏನೋ ಮಾತನಾಡಿದ್ದಾರೆ. ಇದನ್ನು ಅಲ್ಲಗಳೆಯುವ ಯತ್ನ ಮಾಡಿದ ತಮಿಳ್ ಸಾಯಿಗೆ ಇಲ್ಲ.. ಇಲ್ಲ ಎನ್ನುವಂತೆ ಕೈ ಸನ್ನೆ ಮಾಡಿ ಖಡಕ್ ಮಾತನಾಡಿದ್ದಾರೆ. ಅವರು ಏನು ಹೇಳಿದ್ದಾರೆ ಎನ್ನುವುದು ಸ್ಪಷ್ಟವಾಗಿಲ್ಲ.

ಆದರೆ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅಣ್ಣಾಮಲೈ ಸೋಲಿಗೆ ಪಕ್ಷದೊಳಗಿನ ಸಂಘರ್ಷವೂ ಕಾರಣ ಎನ್ನಲಾಗಿತ್ತು. ಅಣ್ಣಾಮಲೈ ಮತ್ತು ತಮಿಳ್ ಸಾಯಿ ಎರಡು ಬಣಗಳಾಗಿವೆ. ಈ ಇಬ್ಬರ ನಡುವಿನ ಸಂಘರ್ಷವೇ ತಮಿಳುನಾಡು ಬಿಜೆಪಿಯಲ್ಲಿ ಒಳಗಜಗಳಗಳು ನಡೆಯುತ್ತಿವೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅಮಿತ್ ಶಾ ಕ್ಲಾಸ್ ತೆಗೆದುಕೊಂಡಿರಬಹುದು ಎನ್ನಲಾಗಿದೆ. ಆದರೆ ಇದನ್ನೇ ಕಾಂಗ್ರೆಸ್, ಡಿಎಂಕೆ ಸೇರಿದಂತೆ ವಿಪಕ್ಷಗಳು ಟೀಕಿಸಿದ್ದು, ತಮಗಿಂತ ವಯಸ್ಸಿನಲ್ಲಿ ಹಿರಿಯೆ ಎನ್ನುವುದನ್ನೂ ನೋಡದೇ ಅಮಿತ್ ಶಾ ವೇದಿಕೆಯಲ್ಲೇ ತಮಿಳ್ ಸಾಯಿ ಮಾನಹಾನಿ ಮಾಡಿದ್ದಾರೆ ಎಂದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments