Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಮೋದಿ, ಜೇಟ್ಲಿಯೊಂದಿಗೆ ಅಮಿತ್ ಷಾ

Webdunia
ಗುರುವಾರ, 14 ಡಿಸೆಂಬರ್ 2017 (18:12 IST)
ಬಿಜೆಪಿ ಅಧ್ಯಕ್ಷರಾದ ಅಮಿತ್ ಷಾ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅರುಣ್ ಜೇಟ್ಲೆ ಅವರ ಜೊತೆಗೆ ರಾಜ್ಯಸಭೆಯಲ್ಲಿ ಮುಂಬದಿಯ ಆಸನಗಳಲ್ಲಿ ಸೇರ್ಪಡೆಗೊಳ್ಳುವ ಮೂಲಕ ರಾಜ್ಯಸಭೆಯಲ್ಲಿನ ಎನ್‌ಡಿಎ ಧ್ವನಿಯನ್ನು ಇನ್ನಷ್ಟು ಬಲಿಷ್ಠಗೊಳಿಸಲಿದ್ದಾರೆ.
ಸಂಸತ್ತಿನ ಮೇಲ್ಮನೆಯ ಅಧ್ಯಕ್ಷ ಸ್ಥಾನದಲ್ಲಿದ್ದ ಎಂ ವೆಂಕಯ್ಯ ನಾಯ್ಡು ಅವರು ಹಿರಿಯ ಮುಖಂಡರಾಗಿ ಮುಂದಾಳತ್ವವನ್ನು ವಹಿಸಿದ್ದರು, ಇದೀಗ ಅಮಿತ್ ಷಾ ಅವರು ಆ ಸ್ಥಾನವನ್ನು ಕೈಗೆತ್ತಿಕೊಳ್ಳಲಿದ್ದಾರೆ.
 
ಹೊಸ ಸದಸ್ಯರಿಗೆ ರಾಜ್ಯಸಭಾ ಸಚಿವಾಲಯವು ಆಸನ ವ್ಯವಸ್ಥೆಗಳನ್ನು ನೀಡಿದೆ. ಷಾ ಅವರು ಮುಂಬದಿಯ ಸಾಲಿನಲ್ಲಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕ ಅರುಣ್ ಜೇಟ್ಲೆ ಅವರ ಇನ್ನೊಂದು ಬದಿಯಲ್ಲಿ ಆಸೀನರಾಗಲಿದ್ದಾರೆ.
 
ಷಾ ಅವರು ಆಡಳಿತ ಪಕ್ಷದ ಬಲವನ್ನು ಹೆಚ್ಚಿಸಲಿದ್ದಾರೆ. ವಿರೋಧ ಪಕ್ಷದ ಮುಂದಿನ ಸಾಲುಗಳಲ್ಲಿನ ಮೂರು ಪ್ರಮುಖ ನಾಯಕರು ಮತ್ತು ವಾಗ್ಮಿಗಳಾದ ರೆಬೆಲ್ ಜೆಡಿ(ಯು) ಸದಸ್ಯ ಶರದ್ ಯಾದವ್, ಸಿಪಿಐ(ಎಂ) ನ ಸೀತಾರಾಮ್ ಯೆಚೂರಿ ಮತ್ತು ಬಿಎಸ್‌ಪಿಯ ಮಾಯಾವತಿ ಅನುಪಸ್ಥಿತಿಯಲ್ಲಿ ವಿರೋಧ ಪಕ್ಷವು ದುರ್ಬಲವಾಗಲಿದೆ.
 
ಎನ್‌ಡಿಎಗೆ ಸೇರ್ಪಡೆಗೊಳ್ಳುತ್ತಿರುವ ನಿತೀಶ್ ಕುಮಾರ್ ಅವರ ಜೆಡಿ(ಯು), ಅದರ ಸದಸ್ಯರು ವಿರೋಧ ಪಕ್ಷದಿಂದ ಮುಂಬದಿಯ ಆಸನಗಳಿಗೆ ಸ್ಥಳಾಂತರಗೊಳ್ಳಲಿದ್ದಾರೆ. ಯಾದವ್ ಅವರನ್ನು ಇತ್ತೀಚೆಗೆ ಪಕ್ಷದಿಂದ ಹೊರಹಾಕಲಾಗಿತ್ತು ಮತ್ತು ರಾಜ್ಯಸಭಾ ಅಧ್ಯಕ್ಷ ನಾಯ್ಡು ಅವರಿಂದ ಅನರ್ಹಗೊಳಿಸಲಾಗಿತ್ತು. ಜೆಡಿ(ಯು) ನಾಯಕರಾದ ಆರ್‌ಸಿಪಿ ಸಿಂಗ್ ಅವರು ಯಾದವ್ ಅವರ ಮೇಲ್ಮನೆಯಲ್ಲಿ ಪಕ್ಷದ ನಾಯಕರ ಸ್ಥಾನವನ್ನು ತುಂಬಲಿದ್ದಾರೆ.
 
ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಯೆಚೂರಿ ಅವರ ಅನುಪಸ್ಥಿತಿಯಲ್ಲಿ ಪ್ರತಿಪಕ್ಷದ ಧ್ವನಿಯು ಅದರ ಶಕ್ತಿಯನ್ನು ಕಳೆದುಕೊಳ್ಳುತ್ತದೆ. ಯಚೂರಿ ಅವರ ಪಕ್ಷವು ಸಂಸತ್ತಿನಲ್ಲಿ ಮೂರನೇ ಅವಧಿಯನ್ನು ನೀಡುವುದಿಲ್ಲವೆಂದು ನಿರ್ಧರಿಸಿದ ನಂತರ ರಾಜ್ಯಸಭೆಯಲ್ಲಿ ಅವರ ಅಧಿಕಾರಾವಧಿಯು ಅಂತ್ಯಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಮುಂದಿನ ಸುದ್ದಿ
Show comments