Webdunia - Bharat's app for daily news and videos

Install App

ಹೈದ್ರಾಬಾದ್ ವಿಮೋಚನಾ ದಿನಾಚರಣೆ ಶುಭಾಷಯ ಕೋರಿದ ಅಮಿತ್ ಶಾ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (13:28 IST)
ನವದೆಹಲಿ,ಸೆ.17 : ಹೈದರಾಬಾದ್ ವಿಮೋಚನಾ ದಿನಾಚರಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣ ಮತ್ತು ಮರಾಠವಾಡ ಪ್ರದೇಶದ ಜನರಿಗೆ ಶುಭಾಷಯ ಕೋರಿದ್ದಾರೆ. ದೇಶದ ಏಕತೆಗೆ ಪ್ರಾಣತೆತ್ತ ಮಹಾನುಭಾವರಿಗೆ ನಾವು ಎಂದೆಂದೂ ಋಣಿಯಾಗಿರುತ್ತೇವೆ ಎಂದು ಅವರು ಹೇಳಿದ್ದಾರೆ.

ಆಖಂಡ ಭಾರತಕ್ಕೆ ಸೇರ್ಪಡೆಗೊಳ್ಳಲು ಮೀನಾಮೇಷ ಎಣಿಸುತ್ತಿದ್ದ ಹೈದರಾಬಾದ್ ಮೇಲೆ ಸೇನಾ ದಾಳಿ ನಡೆಸಿದ್ದ ಅಂದಿನ ಗೃಹಸಚಿವ ಸರ್ದಾರ್ಭಾಯ್ ಪಟೇಲ್ ಅವರು 1948 ಸೆ.17ರಂದು ಹೈದ್ರಾಬಾದ್ ಅನ್ನು ಭಾರತದ ಅವಿಭಾಜ್ಯ ಅಂಗ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.
ನಿಜಾಮರ ವಿರುದ್ಧ ಹೋರಾಡಿ ಹೈದರಾಬಾದ್ ವಿಮೋಚನೆ ಕಲ್ಪಿಸುವ ಕಾರ್ಯದಲ್ಲಿ ತಮ್ಮ ಪ್ರಾಣ ಬಲಿಕೊಟ್ಟ ಹುತಾತ್ಮರಿಗೆ ನಾನು ಶಿರಭಾಗಿ ನಮಸ್ಕರಿಸುತ್ತೇನೆ ಎಂದು ಅವರು ಟ್ವಿಟ್ ಮಾಡಿದ್ದಾರೆ.
ಕಾರ್ಯಕ್ರಮವೊಂದರ ನಿಮಿತ್ತ ಇಂದು ತೆಲಂಗಾಣಕ್ಕೆ ಶಾ ಭೇಟಿ ನೀಡುತ್ತಿರುವ ದಿನವೇ ತೆಲಂಗಾಣ ಸ್ವಾತಂತ್ರ್ಯ ದಿನಾಚರಣೆ ಆಗಿರುವುದು ವಿಶೇಷ.
ಹೀಗಾಗಿ ಹೈದರಾಬಾದ್ ವಿಮೋಚನಾ ದಿನಾಚರಣೆಗೆ ಟ್ವಿಟರ್ನಲ್ಲಿ ತೆಲುಗುಭಾಷಿಕರಿಗೆ ಶುಭಾಷಯ ಕೋರಿ ಟ್ವಿಟ್ನಲ್ಲಿ ಪಟೇಲ್ ಅವರ ಭಾವಚಿತ್ರವನ್ನು ಶೇರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ತಲಾದಾಯದಲ್ಲಿ ದೇಶದಲ್ಲೇ ಕರ್ನಾಟಕ NO.1:ಇದೆಲ್ಲ ಗ್ಯಾರಂಟಿ ಯೋಜನೆ ಕೊಡುಗೆ ಎಂದ ಸಿಎಂ

ದೋಹಾಗೆ ಹೊರಟಿದ್ದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ತಾಂತ್ರಿಕ ದೋಷ, ಕ್ಯಾಲಿಕಟ್‌ಗೆ ವಾಪಾಸ್‌

ನಕಲಿ ರಾಯಭಾರ ಕಚೇರಿ ನಡೆಸುತ್ತಿದ್ದ ಹರ್ಷವರ್ಧನ್ ಜೈನ್‌ಗಿತ್ತು ಇನ್ನಷ್ಟು ದಂಧೆಗಳು

ಮುಂದಿನ ಸುದ್ದಿ
Show comments