Webdunia - Bharat's app for daily news and videos

Install App

ಹೈದ್ರಾಬಾದ್ ವಿಮೋಚನಾ ದಿನಾಚರಣೆ ಶುಭಾಷಯ ಕೋರಿದ ಅಮಿತ್ ಶಾ

Webdunia
ಶುಕ್ರವಾರ, 17 ಸೆಪ್ಟಂಬರ್ 2021 (13:28 IST)
ನವದೆಹಲಿ,ಸೆ.17 : ಹೈದರಾಬಾದ್ ವಿಮೋಚನಾ ದಿನಾಚರಣೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣ ಮತ್ತು ಮರಾಠವಾಡ ಪ್ರದೇಶದ ಜನರಿಗೆ ಶುಭಾಷಯ ಕೋರಿದ್ದಾರೆ. ದೇಶದ ಏಕತೆಗೆ ಪ್ರಾಣತೆತ್ತ ಮಹಾನುಭಾವರಿಗೆ ನಾವು ಎಂದೆಂದೂ ಋಣಿಯಾಗಿರುತ್ತೇವೆ ಎಂದು ಅವರು ಹೇಳಿದ್ದಾರೆ.

ಆಖಂಡ ಭಾರತಕ್ಕೆ ಸೇರ್ಪಡೆಗೊಳ್ಳಲು ಮೀನಾಮೇಷ ಎಣಿಸುತ್ತಿದ್ದ ಹೈದರಾಬಾದ್ ಮೇಲೆ ಸೇನಾ ದಾಳಿ ನಡೆಸಿದ್ದ ಅಂದಿನ ಗೃಹಸಚಿವ ಸರ್ದಾರ್ಭಾಯ್ ಪಟೇಲ್ ಅವರು 1948 ಸೆ.17ರಂದು ಹೈದ್ರಾಬಾದ್ ಅನ್ನು ಭಾರತದ ಅವಿಭಾಜ್ಯ ಅಂಗ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.
ನಿಜಾಮರ ವಿರುದ್ಧ ಹೋರಾಡಿ ಹೈದರಾಬಾದ್ ವಿಮೋಚನೆ ಕಲ್ಪಿಸುವ ಕಾರ್ಯದಲ್ಲಿ ತಮ್ಮ ಪ್ರಾಣ ಬಲಿಕೊಟ್ಟ ಹುತಾತ್ಮರಿಗೆ ನಾನು ಶಿರಭಾಗಿ ನಮಸ್ಕರಿಸುತ್ತೇನೆ ಎಂದು ಅವರು ಟ್ವಿಟ್ ಮಾಡಿದ್ದಾರೆ.
ಕಾರ್ಯಕ್ರಮವೊಂದರ ನಿಮಿತ್ತ ಇಂದು ತೆಲಂಗಾಣಕ್ಕೆ ಶಾ ಭೇಟಿ ನೀಡುತ್ತಿರುವ ದಿನವೇ ತೆಲಂಗಾಣ ಸ್ವಾತಂತ್ರ್ಯ ದಿನಾಚರಣೆ ಆಗಿರುವುದು ವಿಶೇಷ.
ಹೀಗಾಗಿ ಹೈದರಾಬಾದ್ ವಿಮೋಚನಾ ದಿನಾಚರಣೆಗೆ ಟ್ವಿಟರ್ನಲ್ಲಿ ತೆಲುಗುಭಾಷಿಕರಿಗೆ ಶುಭಾಷಯ ಕೋರಿ ಟ್ವಿಟ್ನಲ್ಲಿ ಪಟೇಲ್ ಅವರ ಭಾವಚಿತ್ರವನ್ನು ಶೇರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments