Webdunia - Bharat's app for daily news and videos

Install App

ಐಶ್ವರ್ಯಾ ರೈ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ರಾಹುಲ್ ಗಾಂಧಿಗೆ ಅಮಿತಾಭ್ ಬಚ್ಚನ್ ಟಾಂಗ್

Krishnaveni K
ಗುರುವಾರ, 22 ಫೆಬ್ರವರಿ 2024 (13:15 IST)
ಮುಂಬೈ: ಭಾರತ್ ಜೋಡೋ ಯಾತ್ರೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಕೇವಲವಾಗಿ ಮಾತನಾಡಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅಮಿತಾಭ್ ಬಚ್ಚನ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

ಭಾರತ್ ಜೋಡೋ ಯಾತ್ರೆ ವೇಳೆ ಎರಡು ಬಾರಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗಿದ್ದ ಅಮಿತಾಭ‍್ ಬಚ್ಚನ್ ಬಗ್ಗೆ ಮತ್ತು ಅವರ ಸೊಸೆ, ನಟಿ ಐಶ್ವರ್ಯಾ ರೈ ಬಗ್ಗೆ ರಾಹುಲ್ ಗಾಂಧಿ ಲೇವಡಿ ಮಾಡಿದ್ದರು. ಐಶ್ವರ್ಯಾ ರಾಮಮಂದಿರ ಉದ್ಘಾಟನೆಗೆ ಹೋಗಿರಲಿಲ್ಲ. ಹಾಗಿದ್ದರೂ ಹೋಗಿದ್ದರು ಎಂಬಂತೆ ಮಾತನಾಡಿದ್ದರು.

ಮತ್ತೊಮ್ಮೆ ಐಶ್ವರ್ಯಾ ರೈ ಬಗ್ಗೆಯೇ ರಾಹುಲ್ ಗಾಂಧಿ ಕಾಮೆಂಟ್ ಮಾಡಿದ್ದು, ‘ಕುಣಿಯುವವಳು’ (ನಾಚ್ ನೇ ವಾಲಿ) ಎಂದು ಕೇವಲವಾಗಿ ಮಾತನಾಡಿದ್ದರು. ರಾಹುಲ್ ಕಾಮೆಂಟ್ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಬಿಗ್ ಬಿ ಅಮಿತಾಭ್ ಕೂಡಾ ಸೊಸೆ ಮತ್ತು ತನ್ನ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿಗೆ ಪರೋಕ್ಷವಾಗಿ ಟಾಂಗ್ ಕೊಟಟಿದ್ದಾರೆ. ‘ಎಲ್ಲ ಜಂಜಾಟಗಳನ್ನು ಬದಿಗೊತ್ತಿ ಸಂಜೆ ವೇಳೆ ದೈಹಿಕ ಮತ್ತು ಮಾನಸಿಕ ಆರೋಗ್ಯದತ್ತ ಗಮನ ಹರಿಸುತ್ತಿದ್ದೇನೆ’ ಎಂದಿದ್ದಾರೆ.

ಪ್ರಯಾಗ್ ರಾಜ್ ನಲ್ಲಿ ಭಾರತ್ ಜೋಡೋ ಯಾತ್ರೆ  ವೇಳೆ ರಾಹುಲ್ ಗಾಂಧಿ ತಮ್ಮ ಭಾಷಣದ ನಡುವೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಅಮಿತಾಭ್ ಬಚ್ಚನ್, ಐಶ್ವರ್ಯಾ ರೈ, ಪ್ರಧಾನಿ ಮೋದಿ ಬಂದಿದ್ದರು. ಆದರೆ ಅಲ್ಲಿ ಯಾರಾದರೂ ಹಿಂದುಳಿದ ವರ್ಗದವರು ಇದ್ದಿದ್ದನ್ನು ನೋಡಿದ್ದೀರಾ ಎಂದು ವಾಗ್ದಾಳಿ ನಡೆಸಿದ್ದರು. ಅಸಲಿಗೆ ಐಶ್ವರ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗಿಯೇ ಇರಲಿಲ್ಲ. ಮತ್ತೊಮ್ಮೆ ಮಾಧ್ಯಮಗಳು ಕೇವಲ ಐಶ್ವರ್ಯಾ ರೈ ಡ್ಯಾನ್ಸ್ ಮಾಡುವುದನ್ನು, ಪ್ರಧಾನಿ ಮೋದಿಯನ್ನು ಮಾತ್ರ ತೋರಿಸುತ್ತಾರೆ ಎಂದಿದ್ದರು. ಹೀಗೆ ವಿನಾಕಾರಣ ತಮ್ಮ ಭಾಷಣಗಳಲ್ಲಿ ಐಶ‍್ವರ್ಯಾರನ್ನು ಎಳೆದು ತರುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments