Select Your Language

Notifications

webdunia
webdunia
webdunia
webdunia

ಒತ್ತಡಕ್ಕೆ ಮಣಿದು ಮುಖ್ಯಮಂತ್ರಿಯಾಗುತ್ತಿದ್ದೇನೆ: ಶಶಿಕಲಾ ನಟರಾಜನ್

ಒತ್ತಡಕ್ಕೆ ಮಣಿದು ಮುಖ್ಯಮಂತ್ರಿಯಾಗುತ್ತಿದ್ದೇನೆ: ಶಶಿಕಲಾ ನಟರಾಜನ್
ಚೆನ್ನೈ , ಭಾನುವಾರ, 5 ಫೆಬ್ರವರಿ 2017 (17:23 IST)
'ನಿಮ್ಮಲ್ಲರ ಒತ್ತಡಕ್ಕೆ ಮಣಿದು ಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದೇನೆ' ಎಂದು ಎಐಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಹೇಳಿದ್ದಾರೆ. 
ತಮ್ಮನ್ನು ಮೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಬಳಿಕ ಎಐಎಡಿಎಂಕೆ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಪನ್ನೀರಸೆಲ್ವಂ ಸೇರಿದಂತೆ ರಾಜ್ಯದ ಜನತೆಯ ಒತ್ತಡಕ್ಕೆ ಮಣಿದು ಸಿಎಂ ಆಗಲು ಒಪ್ಪಿಕೊಂಡಿದ್ದೇನೆ. ಅಮ್ಮನ (ದಿವಂಗತ ಮುಖ್ಯಮಂತ್ರಿ ಜಯಲಲಿತಾ) ಕನಸು ನನಸು ಮಾಡೋಣ. ಅಮ್ಮ ಹಾಕಿಕೊಟ್ಟ ಮಾರ್ಗದಲ್ಲಿ ಸಾಗೋಣ. ಅವರು ರೂಪಿಸಿರುವ ಕಾರ್ಯಕ್ರಮಗಳನ್ನು ಮುಂದುವರೆಸೋಣ ಎಂದರು
 
ನಾಳೆಯೇ ಶಶಿಕಲಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳಿದ್ದು, ಇಂದು ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಲಿರುವ ಪನ್ನೀರ್ ಸೆಲ್ವಂ ಈ ಕುರಿತು ಚರ್ಚಿಸಲಿದ್ದಾರೆ. 
 
ಚೆನ್ನೈನ ರಾಯಪೇಟೆಯಲ್ಲಿರುವ ಎಐಡಿಎಂಕೆ ಮುಖ್ಯ ಕಚೇರಿಯಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 
 
ಜಯಾ ಸಾವಿನ ಬಳಿಕ ಮುಖ್ಯಮಂತ್ರಿಯಾಗಿದ್ದ ಪನ್ನೀರ್ ಸೆಲ್ವಂ ಈಗಾಗಲೇ ಶಶಿಕಲಾ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.ಫ್ಯಾಕ್ಸ್ ಮೂಲಕ ರಾಜ್ಯಪಾಲರಿಗೂ ಸಹ ಅವರು ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.
 
ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿ ಮೋದಿ ಅವರಿಗೂ ಆಹ್ವಾನಿಸಲಾಗಿದ್ದು ಸೋಮವಾರ, ಮಂಗಳವಾರ ಅಥವಾ ಗುರುವಾರ ಅವರು ಪ್ರಮಾಣವಚನವನ್ನು ಸ್ವೀಕರಿಸಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರಿನಲ್ಲಿ ಕ್ರಿಸ್ ಗೇಲ್: ಮುಗಿಬಿದ್ದ ಜನಸಾಗರ