Webdunia - Bharat's app for daily news and videos

Install App

ಅನೈತಿಕ ಸಂಬಂಧ: ಪ್ರಿಯಕರನ ನೆರವಿನಿಂದ ಪತಿಯ ಹತ್ಯೆಗೈದ ಕಾಮುಕ ಪತ್ನಿ

Webdunia
ಮಂಗಳವಾರ, 7 ನವೆಂಬರ್ 2023 (10:51 IST)
ಆರೋಪಿ ಮಹಿಳೆ ತನ್ನ ಪ್ರಿಯಕರನಿಗೆ ಕರೆ ಮಾಡಿ ಮನೆಗೆ ಕರೆಸಿಕೊಂಡು ನಂತರ ಪತಿಯನ್ನು ಮನಬಂದಂತೆ ಥಳಿಸಿ ಹತ್ಯೆ ಮಾಡಿದ್ದಾರೆ. ನಂತರ ಮೃತ ವ್ಯಕ್ತಿಯ ದೇಹವನ್ನು ಸುಲಭವಾಗಿ ಹೊರಗಡೆ ಸಾಗಿಸಲು ತುಂಡು ತುಂಡಾಗಿ ಕತ್ತರಿಸಿ ಕಸದ ಗುಂಡಿಯಲ್ಲಿ ಎಸೆದ ಘಟನೆ ವರದಿಯಾಗಿದೆ.
 
ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಬೆತ್ತಲೆಗೊಳಿಸಿದ್ದಲ್ಲದೇ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆಗೈದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಲೋನಿಯ ಹೊರಭಾಗದಲ್ಲಿ ಕೆಟ್ಟ ವಾಸನೆ ಬರುತ್ತಿದೆ ಎನ್ನುವ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ವ್ಯಕ್ತಿಯೊಬ್ಬನ ಮೃತ ದೇಹ ಪತ್ತೆಯಾಗಿದೆ.
 
ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಮೃತ ವ್ಯಕ್ತಿಯ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಿದ್ದು, ಇಬ್ಬರು ಸೇರಿ ಹತ್ಯೆ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಪ್ರಿಯಕರನ ಸಹಾಯದೊಂದಿಗೆ ಪತಿಯನ್ನು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಮೃತ ದೇಹವನ್ನು ಸುಲಭವಾಗಿ ಸಾಗಿಸಲು ತುಂಡು ತುಂಡಾಗಿ ಕತ್ತರಿಸಿದ್ದಾಗಿ ಹೇಳಿದ್ದಾಳೆ.
 
ಪತ್ನಿ,  ಪ್ರಿಯಕರನೊಂದಿಗೆ ಅನೈತಿಕ ಸಂಬಂಧವಿರಿಸಿಕೊಂಡಿರುವ ಬಗ್ಗೆ ಹಲವಾರು ಬಾರಿ ಪತಿ ಪತ್ನಿಗೆ ಎಚ್ಚರಿಕೆ ನೀಡಿದ್ದರೂ ಆಕೆ ಕ್ಯಾರೆ ಎಂದಿರಲಿಲ್ಲ. ಪ್ರತಿನಿತ್ಯ ಪತಿ ಮತ್ತು ಪತ್ನಿಯ ಮಧ್ಯೆ ವಾಗ್ವಾದ ನಡೆದಿತ್ತು. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ನಿವಾರಿಸಬೇಕು ಎನ್ನುವ ಉದ್ದೇಶದಿಂದ ಪ್ರಿಯಕರನ ಬೆಂಬಲ ಪಡೆದು ಹತ್ಯೆ ಮಾಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳಾದ ಭಾರತಿ  ಮತ್ತು ಆಕೆಯ ಪ್ರಿಯಕರ ಸೂರ್ಯಪ್ರಕಾಶ್ ವಿರುದ್ಧ ಹತ್ಯೆ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments