ಆಂಧ್ರಪ್ರದೇಶ: ದೇಶದ ಅತ್ಯಂತ ಪೂಜಾನೀಯ ಕ್ಷೇತ್ರಗಳಲ್ಲಿ ಒಂದಾಗಿರುವ ಧರ್ಮಸ್ಥಳ ಈಚೆಗೆ ರಾಷ್ಟ್ರವ್ಯಾಪಿ ಅನಿರೀಕ್ಷಿತ ಕಾರಣಗಳಿಂದ ಗಮನ ಸೆಳೆಯುತ್ತಿದೆ.
ಇನ್ನೂ ಇದು ದೇವಸ್ಥಾನವ ವಿರುದ್ಧದ ಷಡ್ಯಂತ್ರ ಎಂದು ಗಂಭೀರ ಆರೋಪ ಕೇಳಿಬರುತ್ತಿದೆ. ಸದ್ಯ ಧರ್ಮಸ್ಥಳ ವಿರುದ್ಧದ ಹಲವು ಆರೋಪಗಳ ಪ್ರಕರಣ ಸಂಬಂಧ ಎಸ್ಐಟಿ ತನಿಖೆ ನಡೆಸುತ್ತಿದೆ.
ಈ ನಡುವೆ ದೇವಸ್ಥಾನದ ಪರ ಬೆಂಬಲ ಸೂಚಿಸಲು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರಂದು ಇತರ ರಾಜಕೀಯ ವ್ಯಕ್ತಿಗಳೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಎಸ್ಐಟಿ ತನಿಖೆಯ ಬೆಳವಣಿಗೆ ನಡುವೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಪ್ರಿಯ ನಟ ಪವನ್ ಕಲ್ಯಾಣ್ ಅವರು ಸೆಪ್ಟೆಂಬರ್ 11 ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.
ಸಂಜೆ 5 ಗಂಟೆಗೆ ಆಗಮಿಸುವ ನಿರೀಕ್ಷೆಯಿದೆ, ಪವನ್ ಕಲ್ಯಾಣ್ ಅವರು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಂಜೆ ಆರತಿ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.
ಪ್ರಸ್ತುತ ಆಂಧ್ರಪ್ರದೇಶದಲ್ಲಿ ಟಿಡಿಪಿ ಮತ್ತು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಜನಸೇನಾ ಪಕ್ಷದ ಮುಖ್ಯಸ್ಥರು ತಮ್ಮ ಭೇಟಿಯ ಸಮಯದಲ್ಲಿ ದೇವಾಲಯದ ಅಧಿಕಾರಿಗಳನ್ನು ಭೇಟಿ ಮಾಡುವ ಸಾಧ್ಯತೆಯಿದೆ.