Webdunia - Bharat's app for daily news and videos

Install App

ಸಾರ್ವಜನಿಕ ಸಭೆಗೆ ಆಂಧ್ರ ಸರ್ಕಾರ ನಿಷೇಧ

Webdunia
ಗುರುವಾರ, 5 ಜನವರಿ 2023 (10:31 IST)
ಅಮರಾವತಿ : ಸಾರ್ವಜನಿಕ ಸುರಕ್ಷತೆಯ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಹೆದ್ದಾರಿ ಸೇರಿದಂತೆ ರಸ್ತೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಹಾಗೂ ರ್ಯಾಲಿಗಳನ್ನು ನಡೆಸುವುದನ್ನು ನಿಷೇಧಿಸಿದೆ.

ಕಳೆದ ವಾರ ಕಂದುಕೂರಿನಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಡೆಸಿದ್ದ ರ್ಯಾಲಿ ವೇಳೆ ನೂಕುನುಗ್ಗಲು ಉಂಟಾಗಿತ್ತು. ಈ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ್ದರು. ಈ ಬೆನ್ನಲ್ಲೇ ಆಂಧ್ರ ಸರ್ಕಾರ ನಿಷೇಧಾಜ್ಞೆಯನ್ನು ಜಾರಿಗೆ ತಂದಿದೆ.

ಈ ಬಗ್ಗೆ ರಾಜ್ಯ ಗೃಹ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ಹರೀಶ್ ಕುಮಾರ್ ಗುಪ್ತಾ ಮಾತನಾಡಿ, ಸಾರ್ವಜನಿಕ ಸಂಚಾರ, ತುರ್ತು ಸೇವೆ, ಅಗತ್ಯ ವಸ್ತುಗಳ ಚಲನೆಗೆ ಅಡ್ಡಿಯಾಗದ ರೀತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಲು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರು ಅನುವು ಮಾಡಿಕೊಡಬೇಕು ಎಂದು ತಿಳಿಸಿದರು.

ಅಧಿಕಾರಿಗಳು ರಸ್ತೆಗಳಲ್ಲಿ ಸಭೆಗಳಿಗೆ ಅನುಮತಿ ನೀಡುವುದನ್ನು ತಪ್ಪಿಸಬೇಕು. ಅಪರೂಪದ ಸಂದರ್ಭದಲ್ಲಿ ಮಾತ್ರ ಸಾರ್ವಜನಿಕ ಸಭೆಗಳಿಗೆ ಅನುಮತಿಯನ್ನು ನೀಡಬೇಕು ಎಂದು ಸೂಚಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments