Webdunia - Bharat's app for daily news and videos

Install App

ಮನೆ ಸಾಮಾನು ಆರ್ಡರ್ ಮಾಡಿದರೆ ಸಿಕ್ಕಿದ್ದು ನೋಡಿ ಮಹಿಳೆ ಮೂರ್ಛೆ ಹೋಗೋದೊಂದೇ ಬಾಕಿ (Video)

Krishnaveni K
ಶುಕ್ರವಾರ, 20 ಡಿಸೆಂಬರ್ 2024 (16:02 IST)
Photo Credit: X
ಹೈದರಾಬಾದ್: ಆನ್ ಲೈನ್ ನಲ್ಲಿ ಏನನ್ನೋ ಆರ್ಡರ್ ಮಾಡಿದರೆ ಇನ್ನೇನೋ ಸಿಗುವುದು ಹೊಸತೇನಲ್ಲ. ಆದರೆ ಆಂಧ್ರಪ್ರದೇಶದಲ್ಲಿ ಮಹಿಳೆಯೊಬ್ಬಳು ಆನ್ ಲೈನ್ ನಲ್ಲಿ ಮನೆ ಸಾಮಾನುಗಳನ್ನು ಆರ್ಡರ್ ಮಾಡಿದರೆ ಸಿಕ್ಕಿದ್ದು ನೋಡಿ ಮೂರ್ಛೆ ಹೋಗೋದೊಂದೇ ಬಾಕಿ.

ನಾಗ ತುಳಸಿ ಎಂಬ ಮಹಿಳೆ ಸರ್ಕಾರದಿಂದ ಮಂಜೂರಾದ ನಿವೇಶನದಲ್ಲಿ ಮನೆ ಕಟ್ಟಿಸುತ್ತಿದ್ದಳು. ಮನೆ ಕಟ್ಟಿಸಲು ಆಕೆಗೆ ಕ್ಷತ್ರಿಯ ಸೇವಾ ಸಮಿತಿ ಹಣಕಾಸಿನ ಸಹಾಯ ಮಾಡುತ್ತಿದೆ. ಇತ್ತೀಚೆಗೆ ಆಕೆ ಮನೆಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ಕ್ಷತ್ರಿಯ ಸಮಾಜದ ಸಹಾಯ ಕೇಳಿದ್ದಳು.

ಅದರಂತೆ ಆಕೆಗೆ ಆನ್ ಲೈನ್ ನಲ್ಲಿ ಸ್ವಿಚ್, ಫ್ಯಾನ್ ಸೇರಿದಂತೆ ಮನೆ ಸಾಮಗ್ರಿಗಳು ಸದ್ಯದಲ್ಲೇ ಬರಲಿದೆ ಎಂದು ವ್ಯಾಟ್ಸಪ್ ಸಂದೇಶ ಬಂದಿತ್ತು. ಅದರಂತೆ ಗುರುವಾರ ರಾತ್ರಿ ಮಹಿಳೆಗೆ ಪಾರ್ಸೆಲ್ ಬಂತು. ಆದರೆ ಪಾರ್ಸಲ್ ನಲ್ಲಿ ಕೊಳೆತ ಮೃತದೇಹವೊಂದಿತ್ತು. ಜೊತೆಗೆ 1.3 ಕೋಟಿ ರೂ. ನೀಡಲು ಸಂದೇಶ ಪತ್ರವೂ ಇತ್ತು. ತಪ್ಪಿದರೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂಬ ಬೆದರಿಕೆಯೂ ಇತ್ತು.

ತಕ್ಷಣವೇ ಆಕೆ ಪೊಲೀಸರಿಗೆ ಮಾಹಿತಿ ನಿಡಿದ್ದಾರೆ. ತಕ್ಷಣವೇ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ನಡೆಸಿದ್ದರು. ಈ ವೇಳೆ ನಾಲ್ಕೈದು ದಿನಗಳ ಹಿಂದೆಯೇ ಸಾವಾಗಿರಬಹುದು ಎಂದು ವರದಿ ಬಂದಿದೆ. ಇದೀಗ ಈ ಮೃತದೇಹ ಯಾರದ್ದು, ಪಾರ್ಸಲ್ ನಲ್ಲಿ ಹೇಗೆ ಬಂತು ಎಂಬ ವಿವರಗಳನ್ನು ಕಲೆಹಾಕಲು ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments