Webdunia - Bharat's app for daily news and videos

Install App

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

Sampriya
ಭಾನುವಾರ, 27 ಜುಲೈ 2025 (12:08 IST)
Photo Credit X
ಬೈಕ್ ಸವಾರನೊಬ್ಬ ಚಿರತೆ ದಾಳಿಯಿಂದ ಜೆಸ್ಟ್ ಎಸ್ಕೇಪ್ ಆಗಿರುವ ವಿಡಿಯೋವೊಂದು ಸಾಮಾಜಿಕ ಜಾಲ‌ತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಅಲಿಪಿರಿಯ ಝೂ ಪಾರ್ಕ್ ರಸ್ತೆಯಲ್ಲಿ ನಡೆದಿದೆ. 

ಆಂಧ್ರಪ್ರದೇಶದ ತಿರುಪತಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆಗಾಗ ಚಿರತೆಗಳು ಪ್ರತ್ಯಕ್ಷವಾಗುತ್ತಿರುವ ಘಟನೆಗಳು ವರದಿಯಾಗುತ್ತಲೇ ಇದೆ. ಆದರೆ ಇದೀಗ ಚಿರತೆ ದಾಳಿಯಿಂದ ಸವಾರನೊಬ್ಬ ಜೆಸ್ಟ್ ಎಸ್ಕೇಪ್ ಆಗಿದ್ದಾನೆ. 

ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಅಲಿಪಿರಿಯ ಝೂ ಪಾರ್ಕ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಬೈಕ್ ಮೇಲೆ ಏಕಾಏಕಿ ಚಿರತೆ ಎಗರಿದೆ. ಆದರೆ ಬೈಕ್ ವೇಗವಾಗಿ ಇದ್ದಿದ್ದರಿಂದ ಸವಾರ ಪ್ರಾಣಪಾಯದಿಂದ ಪಾರಾಗಿದ್ದಾನೆ. 

ಈ ಭಯಾನಕ ಘಟನೆಯನ್ನು ಕಾರಿನ ಹಿಂದೆ ಹಿಂಬಾಲಿಸಿದ ಡ್ಯಾಶ್‌ಕ್ಯಾಮ್‌ನಿಂದ ಸೆರೆಹಿಡಿಯಲಾಗಿದೆ ಮತ್ತು ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಈ ಕಾಡು ಪ್ರಾಣಿಗಳಿಂದ ತಕ್ಷಣದ ಅಪಾಯವನ್ನು ಎತ್ತಿ ತೋರಿಸುತ್ತದೆ.

ಅದೇ ರಾತ್ರಿ, ಮಧ್ಯರಾತ್ರಿ, ಅರವಿಂದ್ ಕಣ್ಣಿನ ಆಸ್ಪತ್ರೆ ಬಳಿ ಚಿರತೆ ಮತ್ತೆ ಸ್ಥಳೀಯರಿಗೆ ಕಾಣಿಸಿಕೊಂಡಿದ್ದು, ನಿವಾಸಿಗಳ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments